25.7 C
ಪುತ್ತೂರು, ಬೆಳ್ತಂಗಡಿ
May 17, 2025
ವರದಿ

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

ಉಜಿರೆ : ಇಲ್ಲಿಯ ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವ, ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ ಕಾರ್ಯಕ್ರಮವು ಮಾ.30ರಂದು ನಡೆಯಿತು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಪ್ರೋ. ಪಿ.ಎಲ್. ಧರ್ಮ ಉಪಕುಲಪತಿಗಳು ಚಿಗುರು ಪತ್ರಿಕೆ ಅನಾವರಣಗೊಳಿಸಿ ಮಾತನಾಡಿ ತಂತ್ರಜ್ಞಾನ ಹೇಗಿರಬೇಕು ಎಂಬುವುದನ್ನು ಪ್ರಯೋಗ ಮಾಡಿದ್ದು ದಿ. ಯಶೋವರ್ಮ ರವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಸಹನೆ ಹಾಗೂ ಸಹಬಾಳ್ವೆಯನ್ನು ಕಲಿಸಿ ಕೊಡುತ್ತದೆ ಎಂದರು.ಅತಿಥಿ ಅಭ್ಯಾಗತರಿಂದ ನಿವೃತ್ತ ಪ್ರಾಧ್ಯಾಪಕರಿಗೆ, ರಾಂಕ್ ವಿಜೇತರಿಗೆ, ಪಿ.ಹೆಚ್.ಡಿ ಮತ್ತು ವಿಶೇಷ ಸಾಧಕ ಅಧ್ಯಾಪಕರಿಗೆ, ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ, ಎನ್.ಸಿ.ಸಿ /ಎನ್.ಎಸ್.ಎಸ್ / ಕ್ರೀಡಾ ವಿಭಾಗದ ರಾಷ್ಟ್ರಮಟ್ಟದ ಸಾಧಕರಿಗೆ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಡಿ. ಹರ್ಷೇಂದ್ರ ಹೆಗ್ಡೆ, ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ, ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ. ಶ್ರೀಧರ ಭಟ್ಟ್ ನಿರೂಪಿಸಿ, ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿ ವರದಿ ವಾಚನ ಮಾಡಿದರು. ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಧನ್ಯವಾದವಿತ್ತರು.

Related posts

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!