25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

ಉಜಿರೆ : ಇಲ್ಲಿಯ ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವ, ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ ಕಾರ್ಯಕ್ರಮವು ಮಾ.30ರಂದು ನಡೆಯಿತು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಪ್ರೋ. ಪಿ.ಎಲ್. ಧರ್ಮ ಉಪಕುಲಪತಿಗಳು ಚಿಗುರು ಪತ್ರಿಕೆ ಅನಾವರಣಗೊಳಿಸಿ ಮಾತನಾಡಿ ತಂತ್ರಜ್ಞಾನ ಹೇಗಿರಬೇಕು ಎಂಬುವುದನ್ನು ಪ್ರಯೋಗ ಮಾಡಿದ್ದು ದಿ. ಯಶೋವರ್ಮ ರವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಸಹನೆ ಹಾಗೂ ಸಹಬಾಳ್ವೆಯನ್ನು ಕಲಿಸಿ ಕೊಡುತ್ತದೆ ಎಂದರು.ಅತಿಥಿ ಅಭ್ಯಾಗತರಿಂದ ನಿವೃತ್ತ ಪ್ರಾಧ್ಯಾಪಕರಿಗೆ, ರಾಂಕ್ ವಿಜೇತರಿಗೆ, ಪಿ.ಹೆಚ್.ಡಿ ಮತ್ತು ವಿಶೇಷ ಸಾಧಕ ಅಧ್ಯಾಪಕರಿಗೆ, ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ, ಎನ್.ಸಿ.ಸಿ /ಎನ್.ಎಸ್.ಎಸ್ / ಕ್ರೀಡಾ ವಿಭಾಗದ ರಾಷ್ಟ್ರಮಟ್ಟದ ಸಾಧಕರಿಗೆ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಡಿ. ಹರ್ಷೇಂದ್ರ ಹೆಗ್ಡೆ, ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ, ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ. ಶ್ರೀಧರ ಭಟ್ಟ್ ನಿರೂಪಿಸಿ, ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿ ವರದಿ ವಾಚನ ಮಾಡಿದರು. ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!