ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ: ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಮಾರುತಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಕ್ಕಡದ ಮಹಿಳೆ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕೊಕ್ಕಡ ನಿವಾಸಿ ದಿನೇಶ್‌ ಕುಮಾರ್‌ ಎಂಬವರು ಪೊಲೀಸ್ ರಿಗೆ ನೀಡಿದ ದೂರಿನಲ್ಲಿ, ಮಾ. 30 ರಂದು ಬೆಳಿಗ್ಗೆ, ಕೆ.ಎಂ. ಅಬೂಬಕ್ಕರ್‌ ಎಂಬವರು ತನ್ನ ಓಮ್ನಿ ಕಾರನ್ನು ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯಲ್ಲಿ ಚಲಾಯಿಸಿದ ಪರಿಣಾಮ, ನಾನು ಚಾಲಕನಾಗಿ ನನ್ನ ತಾಯಿ ಲೀಲಾವತಿ ಮತ್ತು ಅಜ್ಜಿ ವಿಜಯಲಕ್ಷ್ಮಿ ಎಂಬವರನ್ನು ಪ್ರಯಾಣಿಕರನ್ನಾಗಿ ಕುಳ್ಳಿರಿಸಿ, ಹೋಗುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತವಾಗಿರುತ್ತದೆ. ಪರಿಣಾಮ ವಿಜಯಲಕ್ಷ್ಮಿರವರಿಗೆ ಗಾಯಗಳಾಗಿ, ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 40/2024 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!