22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಮಾರುತಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಕ್ಕಡದ ಮಹಿಳೆ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕೊಕ್ಕಡ ನಿವಾಸಿ ದಿನೇಶ್‌ ಕುಮಾರ್‌ ಎಂಬವರು ಪೊಲೀಸ್ ರಿಗೆ ನೀಡಿದ ದೂರಿನಲ್ಲಿ, ಮಾ. 30 ರಂದು ಬೆಳಿಗ್ಗೆ, ಕೆ.ಎಂ. ಅಬೂಬಕ್ಕರ್‌ ಎಂಬವರು ತನ್ನ ಓಮ್ನಿ ಕಾರನ್ನು ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯಲ್ಲಿ ಚಲಾಯಿಸಿದ ಪರಿಣಾಮ, ನಾನು ಚಾಲಕನಾಗಿ ನನ್ನ ತಾಯಿ ಲೀಲಾವತಿ ಮತ್ತು ಅಜ್ಜಿ ವಿಜಯಲಕ್ಷ್ಮಿ ಎಂಬವರನ್ನು ಪ್ರಯಾಣಿಕರನ್ನಾಗಿ ಕುಳ್ಳಿರಿಸಿ, ಹೋಗುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತವಾಗಿರುತ್ತದೆ. ಪರಿಣಾಮ ವಿಜಯಲಕ್ಷ್ಮಿರವರಿಗೆ ಗಾಯಗಳಾಗಿ, ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 40/2024 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!