23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಮಾರುತಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಕ್ಕಡದ ಮಹಿಳೆ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕೊಕ್ಕಡ ನಿವಾಸಿ ದಿನೇಶ್‌ ಕುಮಾರ್‌ ಎಂಬವರು ಪೊಲೀಸ್ ರಿಗೆ ನೀಡಿದ ದೂರಿನಲ್ಲಿ, ಮಾ. 30 ರಂದು ಬೆಳಿಗ್ಗೆ, ಕೆ.ಎಂ. ಅಬೂಬಕ್ಕರ್‌ ಎಂಬವರು ತನ್ನ ಓಮ್ನಿ ಕಾರನ್ನು ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯಲ್ಲಿ ಚಲಾಯಿಸಿದ ಪರಿಣಾಮ, ನಾನು ಚಾಲಕನಾಗಿ ನನ್ನ ತಾಯಿ ಲೀಲಾವತಿ ಮತ್ತು ಅಜ್ಜಿ ವಿಜಯಲಕ್ಷ್ಮಿ ಎಂಬವರನ್ನು ಪ್ರಯಾಣಿಕರನ್ನಾಗಿ ಕುಳ್ಳಿರಿಸಿ, ಹೋಗುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತವಾಗಿರುತ್ತದೆ. ಪರಿಣಾಮ ವಿಜಯಲಕ್ಷ್ಮಿರವರಿಗೆ ಗಾಯಗಳಾಗಿ, ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 40/2024 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!