April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya
error: Content is protected !!