22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya
error: Content is protected !!