22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya
error: Content is protected !!