23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya
error: Content is protected !!