September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು.

ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕದ್ರಿ ದೇವಸ್ಥಾನದಿಂದ ತೀರ್ಥ ಪ್ರಸಾದ ತಂದು ರಾಶಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿರಿಯ ವೇಷಧಾರಿಗಳಾದ ರಾಮಣ್ಣ ಮೂಲ್ಯ ಅಂಬಡೆದಡಿ ಮತ್ತು ಓಬಯ್ಯ ದೇವಾಡಿಗ ಇವರಿಗೆ ಸನ್ಮಾನ ಮಾಡಲಾಯಿತು ಹಾಗೂ ಉಚಿತ ಡೋಲು ಸೇವೆ ಸಲ್ಲಿಸಿದ ಪ್ರಸಾದ್ ದಾಯಿಗುಡ್ಡೆ ಇವರನ್ನು ಗೌರವಿಸಲಾಯಿತು.

ಸಂದೀಪ್ ಪಟ್ಲ ನೇತೃತ್ವದಲ್ಲಿ ನಡೆದ ಈ ರಾಶಿ ಪೂಜೆಯಲ್ಲಿ ಊರ ಹಾಗೂ ಪರವೂರ ನೂರಾರು ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಂ. ಗಂಗಾಧರ ಮಿತ್ತಮಾರು ಸೋಮನಾಥ ಬಂಗೇರ ವರ್ಪಳೆ, ಗುರುವಪ್ಪ ಪೂಜಾರಿ, ಪಟ್ಲ ರಾಮಪ್ಪ ಸಣ್ಣಪಟ್ಲ, ನಾರಾಯಣ ಪರಂಟ್ಯಾಲ, ಪುರಂದರ ಪಡುಬೈಲು, ಅಶೋಕ ಕಾಡಂಗೆ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ರವಿ ಸಾಲಿಯಾನ್, ನಂದನ್ , ಗಣೇಶ್ ಕಾಡಂಗೆ, ರಾಜೇಂದ್ರ ಸಾಲಿಯಾನ್, ಧರ್ಣಪ್ಪ, ಪ್ರಮೋದ್, ವಸಂತ ಅಂಚನ್, ಆನಂದ ಅಂಚನ್, ಸಂಕೇತ್ ವರ್ಷಾಳೆ, ಕಿಶೋರ್ ,ಸತೀಶ್ ,ರಮೇಶ್, ಗೇತನ್, ಶಿವಪ್ಪ ಕೊಲ್ಲಂಗೆ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya
error: Content is protected !!