July 23, 2026
ವರದಿ

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

ಉಜಿರೆ : ಇಲ್ಲಿಯ ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವ, ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ ಕಾರ್ಯಕ್ರಮವು ಮಾ.30ರಂದು ನಡೆಯಿತು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಪ್ರೋ. ಪಿ.ಎಲ್. ಧರ್ಮ ಉಪಕುಲಪತಿಗಳು ಚಿಗುರು ಪತ್ರಿಕೆ ಅನಾವರಣಗೊಳಿಸಿ ಮಾತನಾಡಿ ತಂತ್ರಜ್ಞಾನ ಹೇಗಿರಬೇಕು ಎಂಬುವುದನ್ನು ಪ್ರಯೋಗ ಮಾಡಿದ್ದು ದಿ. ಯಶೋವರ್ಮ ರವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಸಹನೆ ಹಾಗೂ ಸಹಬಾಳ್ವೆಯನ್ನು ಕಲಿಸಿ ಕೊಡುತ್ತದೆ ಎಂದರು.ಅತಿಥಿ ಅಭ್ಯಾಗತರಿಂದ ನಿವೃತ್ತ ಪ್ರಾಧ್ಯಾಪಕರಿಗೆ, ರಾಂಕ್ ವಿಜೇತರಿಗೆ, ಪಿ.ಹೆಚ್.ಡಿ ಮತ್ತು ವಿಶೇಷ ಸಾಧಕ ಅಧ್ಯಾಪಕರಿಗೆ, ವಿಶೇಷ ಸಾಧಕ ವಿದ್ಯಾರ್ಥಿಗಳಿಗೆ, ಎನ್.ಸಿ.ಸಿ /ಎನ್.ಎಸ್.ಎಸ್ / ಕ್ರೀಡಾ ವಿಭಾಗದ ರಾಷ್ಟ್ರಮಟ್ಟದ ಸಾಧಕರಿಗೆ ಸನ್ಮಾನ ಮಾಡಲಾಯಿತು.

ವೇದಿಕೆಯಲ್ಲಿ ಡಿ. ಹರ್ಷೇಂದ್ರ ಹೆಗ್ಡೆ, ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ, ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಉಪಸ್ಥಿತರಿದ್ದರು. ಸಹ ಪ್ರಾಧ್ಯಾಪಕ ಡಾ. ಶ್ರೀಧರ ಭಟ್ಟ್ ನಿರೂಪಿಸಿ, ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಡಾ.ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿ ವರದಿ ವಾಚನ ಮಾಡಿದರು. ಉಪಪ್ರಾಂಶುಪಾಲರಾದ ಶಶಿಶೇಖರ ಕಾಕತ್ಕರ್ ಧನ್ಯವಾದವಿತ್ತರು.

Related posts

ಸುಲ್ಕೇರಿಮೊಗ್ರುವಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಜಯಂತಿ ಆಚರಣೆ: ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನೆ,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya
error: Content is protected !!