23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಮಾರುತಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಕ್ಕಡದ ಮಹಿಳೆ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕೊಕ್ಕಡ ನಿವಾಸಿ ದಿನೇಶ್‌ ಕುಮಾರ್‌ ಎಂಬವರು ಪೊಲೀಸ್ ರಿಗೆ ನೀಡಿದ ದೂರಿನಲ್ಲಿ, ಮಾ. 30 ರಂದು ಬೆಳಿಗ್ಗೆ, ಕೆ.ಎಂ. ಅಬೂಬಕ್ಕರ್‌ ಎಂಬವರು ತನ್ನ ಓಮ್ನಿ ಕಾರನ್ನು ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಹೆದ್ದಾರಿಯಲ್ಲಿ ಚಲಾಯಿಸಿದ ಪರಿಣಾಮ, ನಾನು ಚಾಲಕನಾಗಿ ನನ್ನ ತಾಯಿ ಲೀಲಾವತಿ ಮತ್ತು ಅಜ್ಜಿ ವಿಜಯಲಕ್ಷ್ಮಿ ಎಂಬವರನ್ನು ಪ್ರಯಾಣಿಕರನ್ನಾಗಿ ಕುಳ್ಳಿರಿಸಿ, ಹೋಗುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತವಾಗಿರುತ್ತದೆ. ಪರಿಣಾಮ ವಿಜಯಲಕ್ಷ್ಮಿರವರಿಗೆ ಗಾಯಗಳಾಗಿ, ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿರುತ್ತವೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 40/2024 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya
error: Content is protected !!