22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya
error: Content is protected !!