25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya
error: Content is protected !!