September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ.

ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ ಹರಿವು ನಿಂತಿದೆ. ಕಪಿಲಾ ನದಿಯಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿಯ ಮೀನುಗಳಿಗೆ ಅತಿಯಾದ ಆಹಾರ ಹಾಕುವುದರಿಂದ ನೀರು ಕಲುಷಿತವಾಗಿ ದೇವರ ಮೀನುಗಳಿಗೆ ತೊಂದರೆ ಆಗಿದೆ. ಇದನ್ನು ಅರಿತ ದೇವಾಲಯದ ಆಡಳಿತ, ಮೀನುಗಳಿಗೆ ಭಕ್ತರು ಅರಳು ಹಾಕುವುದನ್ನು ನಿಷೇಧ ಮಾಡಿದೆ.

*ರಾಸಾಯನಿಕಯುಕ್ತ ಅರಳು: ಇತ್ತೀಚಿನ ದಿನಗಳಲ್ಲಿ ಎಲ್ಲೂ ಕಂಡುಬರುವ ರಾಸಾಯನಿಕಯುಕ್ತ ವಸ್ತುಗಳಲ್ಲಿ ಅರಳೂ ಸೇರಿಕೊಂಡಿದೆ. ಆರಳಿಗೂ ರಾಸಾಯನಿಕ ವಸ್ತು ಇದೆ ಎಂಬ ಸಂಶಯ ಮೂಡಲಾರಂಬಿಸಿದೆ. ಮೀನುಗಳ ಆಹಾರದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಲ್ಲ ಮತ್ತು ನೀರೂ ಕಲುಷಿತ ಮಾಡಬಲ್ಲ ಅರಳನ್ನು ನಿಷೇಧ ಮಾಡಲಾಗಿದೆ. ಹಿಂದಿನ ಪರಂಪರೆಯಂತೆ ಬಿಳಿ ಅಕ್ಕಿಯನ್ನು ಅಗತ್ಯ ಕಂಡು ಬಂದಲ್ಲಿ ಅಲ್ಪಪ್ರಮಾಣದಲ್ಲಿ ಹಾಕಬಹುದು ಮತ್ತು ಇತರ ಯಾವುದೇ ತಿಂಡಿಯನ್ನು ಹಾಕಬಾರದು. ಈ ಕುರಿತು ಎಲ್ಲಾ ಊರಿನ ಪರ ಊರಿನ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮತ್ತು ಮತ್ಸ್ಯ ಹಿತರಕ್ಷಣಾ ವೇದಿಕೆ ವಿನಂತಿ ಮಾಡಿದೆ.

Related posts

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya
error: Content is protected !!