September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು.

ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಕದ್ರಿ ದೇವಸ್ಥಾನದಿಂದ ತೀರ್ಥ ಪ್ರಸಾದ ತಂದು ರಾಶಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿರಿಯ ವೇಷಧಾರಿಗಳಾದ ರಾಮಣ್ಣ ಮೂಲ್ಯ ಅಂಬಡೆದಡಿ ಮತ್ತು ಓಬಯ್ಯ ದೇವಾಡಿಗ ಇವರಿಗೆ ಸನ್ಮಾನ ಮಾಡಲಾಯಿತು ಹಾಗೂ ಉಚಿತ ಡೋಲು ಸೇವೆ ಸಲ್ಲಿಸಿದ ಪ್ರಸಾದ್ ದಾಯಿಗುಡ್ಡೆ ಇವರನ್ನು ಗೌರವಿಸಲಾಯಿತು.

ಸಂದೀಪ್ ಪಟ್ಲ ನೇತೃತ್ವದಲ್ಲಿ ನಡೆದ ಈ ರಾಶಿ ಪೂಜೆಯಲ್ಲಿ ಊರ ಹಾಗೂ ಪರವೂರ ನೂರಾರು ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಂ. ಗಂಗಾಧರ ಮಿತ್ತಮಾರು ಸೋಮನಾಥ ಬಂಗೇರ ವರ್ಪಳೆ, ಗುರುವಪ್ಪ ಪೂಜಾರಿ, ಪಟ್ಲ ರಾಮಪ್ಪ ಸಣ್ಣಪಟ್ಲ, ನಾರಾಯಣ ಪರಂಟ್ಯಾಲ, ಪುರಂದರ ಪಡುಬೈಲು, ಅಶೋಕ ಕಾಡಂಗೆ, ಅಳದಂಗಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಜನಾರ್ಧನ ಕೊಡಂಗೆ, ರವಿ ಸಾಲಿಯಾನ್, ನಂದನ್ , ಗಣೇಶ್ ಕಾಡಂಗೆ, ರಾಜೇಂದ್ರ ಸಾಲಿಯಾನ್, ಧರ್ಣಪ್ಪ, ಪ್ರಮೋದ್, ವಸಂತ ಅಂಚನ್, ಆನಂದ ಅಂಚನ್, ಸಂಕೇತ್ ವರ್ಷಾಳೆ, ಕಿಶೋರ್ ,ಸತೀಶ್ ,ರಮೇಶ್, ಗೇತನ್, ಶಿವಪ್ಪ ಕೊಲ್ಲಂಗೆ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Related posts

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
error: Content is protected !!