23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

ಕನ್ಯಾಡಿ :   ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ1 ಇದರ 23ನೇ ವಾರ್ಷಿಕೋತ್ಸವದ ಪ್ರಯುಕ್ತ ಆಹ್ವಾನಿತ ಭಜನಾ ತಂಡಗಳಿಂದ ಏಕಕಾಲದಲ್ಲಿ ಭಜನಾ ಕಾರ್ಯಕ್ರಮ, ಗಣಹೋಮ , ಸಾಮೂಹಿಕ ಶ್ರೀ  ಸತ್ಯಾನಾರಾಯಣ ಪೂಜೆ  ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಮಾ. 30  ರಂದು ನಡೆಯಿತು.

 ಸಂಜೆ  ಸಾಮೂಹಿಕ  ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಭಜನಾ ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ  ಶರತ್ ಕೃಷ್ಣ ಪಡುವೆಟ್ನಾಯರು ಉದ್ಘಾಟಿಸಿ ಮಾತನಾಡುತ್ತಾ ಪ್ರಸ್ತುತ ನಮ್ಮ ದೇಶ , ನಮ್ಮ ಜಿಲ್ಲೆ ,ತಾಲೂಕಿನಲ್ಲಿ  ಜನರಲ್ಲಿ ಧಾರ್ಮಿಕ ಜಾಗೃತಿ  ಮೂಡುತ್ತಿದೆ. ಭಜನೆಯ ಮೂಲಕ ಗ್ರಾಮದ ಮಕ್ಕಳು ಹಾಗೂ ಸಾರ್ವಜನಿಕರ  ಸಂಘಟನೆ ಮಾಡಲು ಸಾಧ್ಯವಿದೆ. ಭಜನಾ ಮಂಡಳಿ  ಇಂತಹ  ಉತ್ತಮ ಧಾರ್ಮಿಕ ಕಾರ್ಯಕ್ರಮ ನಡೆಸಿ ಸಂಘಟನೆ ಬಲಪಡಿಸಲು ದೇವರ ಆಶೀರ್ವದವಿರಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮಾರಂಭದ  ಅಧ್ಯಕ್ಷತೆಯನ್ನು  ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಅಶೋಕ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ಉಜಿರೆಯ ಲಕ್ಷ್ಮಿ ಗ್ರೂಪ್ಸ್ ಮಾಲಕ  ಮೋಹನ್ ಕುಮಾರ್ ,  ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ,, ಶ್ರೀ ಕ್ಷೇ.ಧ.ಗ್ರಾ.ಯೋ ಕನ್ಯಾಡಿ ಒಕ್ಕೂಟದ ಅಧ್ಯಕ್ಷ ಮೋಹನ ಗೌಡ ಮೊದಲಾದವರು  ಉಪಸ್ಥಿತರಿದ್ದರು.

ಸೋನಾಕ್ಷಿ ಕಾರ್ಯಕ್ರಮ ನಿರೂಪಿಸಿ, ಭಜನಾ ಮಂಡಳಿಯ ಸ್ಥಾಪಕಾಧ್ಯಕ್ಷ ಪವನ್ ಶೆಟ್ಟಿ ಸ್ವಾಗತಿಸಿ. ಸ್ಥಾಪಕ ಕಾರ್ಯದರ್ಶಿ ತನಿಯಪ್ಪ ಗೌಡ ಧನ್ಯವಾದವಿತ್ತರು.  ಬಳಿಕ ” ವಿಠ್ಠಲ್ ನಾಯಕ್ ಕಲ್ಲಡ್ಕ ಬಳಗದವರಿಂದ “ಗೀತಾ ಸಾಹಿತ್ಯ ಸಂಭ್ರಮ” ಕಾರ್ಯಕ್ರಮ ನಡೆಯಿತು.

Related posts

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಕೊಡೆ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya
error: Content is protected !!