July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

ಕನ್ಯಾಡಿ :   ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ1 ಇದರ 23ನೇ ವಾರ್ಷಿಕೋತ್ಸವದ ಪ್ರಯುಕ್ತ ಆಹ್ವಾನಿತ ಭಜನಾ ತಂಡಗಳಿಂದ ಏಕಕಾಲದಲ್ಲಿ ಭಜನಾ ಕಾರ್ಯಕ್ರಮ, ಗಣಹೋಮ , ಸಾಮೂಹಿಕ ಶ್ರೀ  ಸತ್ಯಾನಾರಾಯಣ ಪೂಜೆ  ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಮಾ. 30  ರಂದು ನಡೆಯಿತು.

 ಸಂಜೆ  ಸಾಮೂಹಿಕ  ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಭಜನಾ ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ  ಶರತ್ ಕೃಷ್ಣ ಪಡುವೆಟ್ನಾಯರು ಉದ್ಘಾಟಿಸಿ ಮಾತನಾಡುತ್ತಾ ಪ್ರಸ್ತುತ ನಮ್ಮ ದೇಶ , ನಮ್ಮ ಜಿಲ್ಲೆ ,ತಾಲೂಕಿನಲ್ಲಿ  ಜನರಲ್ಲಿ ಧಾರ್ಮಿಕ ಜಾಗೃತಿ  ಮೂಡುತ್ತಿದೆ. ಭಜನೆಯ ಮೂಲಕ ಗ್ರಾಮದ ಮಕ್ಕಳು ಹಾಗೂ ಸಾರ್ವಜನಿಕರ  ಸಂಘಟನೆ ಮಾಡಲು ಸಾಧ್ಯವಿದೆ. ಭಜನಾ ಮಂಡಳಿ  ಇಂತಹ  ಉತ್ತಮ ಧಾರ್ಮಿಕ ಕಾರ್ಯಕ್ರಮ ನಡೆಸಿ ಸಂಘಟನೆ ಬಲಪಡಿಸಲು ದೇವರ ಆಶೀರ್ವದವಿರಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮಾರಂಭದ  ಅಧ್ಯಕ್ಷತೆಯನ್ನು  ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಅಶೋಕ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ಉಜಿರೆಯ ಲಕ್ಷ್ಮಿ ಗ್ರೂಪ್ಸ್ ಮಾಲಕ  ಮೋಹನ್ ಕುಮಾರ್ ,  ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ,, ಶ್ರೀ ಕ್ಷೇ.ಧ.ಗ್ರಾ.ಯೋ ಕನ್ಯಾಡಿ ಒಕ್ಕೂಟದ ಅಧ್ಯಕ್ಷ ಮೋಹನ ಗೌಡ ಮೊದಲಾದವರು  ಉಪಸ್ಥಿತರಿದ್ದರು.

ಸೋನಾಕ್ಷಿ ಕಾರ್ಯಕ್ರಮ ನಿರೂಪಿಸಿ, ಭಜನಾ ಮಂಡಳಿಯ ಸ್ಥಾಪಕಾಧ್ಯಕ್ಷ ಪವನ್ ಶೆಟ್ಟಿ ಸ್ವಾಗತಿಸಿ. ಸ್ಥಾಪಕ ಕಾರ್ಯದರ್ಶಿ ತನಿಯಪ್ಪ ಗೌಡ ಧನ್ಯವಾದವಿತ್ತರು.  ಬಳಿಕ ” ವಿಠ್ಠಲ್ ನಾಯಕ್ ಕಲ್ಲಡ್ಕ ಬಳಗದವರಿಂದ “ಗೀತಾ ಸಾಹಿತ್ಯ ಸಂಭ್ರಮ” ಕಾರ್ಯಕ್ರಮ ನಡೆಯಿತು.

Related posts

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya
error: Content is protected !!