September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

ಲಾಯಿಲ: ಶ್ರೀ ಕ್ಷೇತ್ರ ಪಿಲಿಪಂಜರ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು , ಮೂಲ ಮೈಸಂದಾಯ, ಸ್ಥಳ ದೈವ ಪಂಜುರ್ಲಿ ಹಾಗೂ ದೈವರಾಜೆ ಗುಳಿಗ ದೈವಗಳ ಸಾನಿಧ್ಯ ಇಲ್ಲಿಯ ಪ್ರತಿಷ್ಠಾ ದಿನ ಮತ್ತು ದೈವಗಳ ನೇಮೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಡೆಶಿವಾಲಯ ವೇದಮೂರ್ತ ಪಚ್ಚಾಡಿಬೈಲು ಪಿ. ಸುಬ್ರಹ್ಮಣ್ಯ ತಂತ್ರಿಗಳ ಪೌರೋಹಿತ್ಯದಲ್ಲಿ ಮಾ.31ರಂದು ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ತೋರಣ ಮುಹೂರ್ತ, ದೇವತಾ ಪ್ರಾರ್ಥನೆ, ಸ್ವಸ್ತಿ ಪಂಚಗವ್ಯ ಪುಣ್ಯಾಹವಾಚನ, ಗಣಪತಿಹೋಮ, ಶ್ರೀ ದೈವಗಳಿಗೆ ನವಕ ಕಲಶಾರಾಧನೆ, ನಂತರ ಕಲಶಾಭಿಷೇಕ, ಅಲಂಕಾರ ಪೂಜೆ, ಮಧ್ಯಾಹ್ನ ಪರ್ವಾದಿ ಸೇವೆಗಳು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು , ಮೂಲ ಮೈಸಂದಾಯ, ಸ್ಥಳ ದೈವ ಪಂಜುರ್ಲಿ ಹಾಗೂ ದೈವರಾಜೆ ಗುಳಿಗ
ದೈವಗಳ ನೇಮೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಗೌರವ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರು. ಅಧ್ಯಕ್ಷ ಸುರೇಶ್ ಬರಮೇಲು, ಪ್ರಧಾನ ಕಾರ್ಯದರ್ಶಿ ಸುಧಾಕರ್ ಬಿ ಎಲ್, ಕಾರ್ಯದರ್ಶಿ ಪುಷ್ಪರಾಜ್ ಲಾಯಿಲ, ಕೋಶಾಧಿಕಾರಿ ಲಕ್ಷ್ಮಣ್ ಜಿ.ಎನ್, ಉಪಾಧ್ಯಕ್ಷರುಗಳಾದ ಸೀತಾರಾಮ ಹೆಗ್ಡೆ, ಶ್ರೀಮತಿ ಲಕ್ಷ್ಮಿ ರವಿಕುಮಾರ್, ಜೊತೆ ಕಾರ್ಯದರ್ಶಿಗಳಾದ ಶ್ರೀಮತಿ ಉಷಾ ಗೋಕುಲ್ ದಾಸ್, ಅನಿಲ್ ಕಕ್ಕೆನಾ,
ವಿವಿಧ ಸಮಿತಿಯ ಸಂಚಾಲಕರು ಮತ್ತು ಸರ್ವ ಸದಸ್ಯರು ಹಾಒಗೂ ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ತಾಲೂಕಿನ ಕೃಷಿಕರಿಗೆ ರೂ. 48.28 ಕೋಟಿ ಬೆಳೆ ವಿಮೆ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!