September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಬೆಳ್ತಂಗಡಿ: ಕೃಷಿಕ್ ಸರ್ವೋದಯ ಪೌಂಡೇಶನ್ (ರಿ) ಬೆಂಗಳೂರು, ಹಾಸನ ಶಾಖಾ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳಂತೆ ಒಟ್ಟು ಐದು ಲಕ್ಷ ಹಾಗೂ ಒರ್ವ ವಿದ್ಯಾರ್ಥಿನಿಗೆ ಇಪ್ಪತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷರಾದ ಎಚ್ ಪದ್ಮ ಗೌಡ, ಅಧ್ಯಕ್ಷರಾದ ಕುಶಾಲಪ್ಪ ಗೌಡ, ಕಾರ್ಯದರ್ಶಿಗಳಾದ ಗಣೇಶ್ ಗೌಡ ಹಾಗೂ ಕೋಶಾಧಿಕಾರಿಗಳಾದ ಯುವರಾಜ್ ಅನಾರ್ ಇವರುಗಳು ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ ಮಾಡಿದರು. ಪ್ರತಿ ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಬಡ ಕೃಷಿಕ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರಸಾದ್ ಕುಮಾರ್ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
error: Content is protected !!