September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

ಕನ್ಯಾಡಿ :   ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ1 ಇದರ 23ನೇ ವಾರ್ಷಿಕೋತ್ಸವದ ಪ್ರಯುಕ್ತ ಆಹ್ವಾನಿತ ಭಜನಾ ತಂಡಗಳಿಂದ ಏಕಕಾಲದಲ್ಲಿ ಭಜನಾ ಕಾರ್ಯಕ್ರಮ, ಗಣಹೋಮ , ಸಾಮೂಹಿಕ ಶ್ರೀ  ಸತ್ಯಾನಾರಾಯಣ ಪೂಜೆ  ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಮಾ. 30  ರಂದು ನಡೆಯಿತು.

 ಸಂಜೆ  ಸಾಮೂಹಿಕ  ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಭಜನಾ ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ  ಶರತ್ ಕೃಷ್ಣ ಪಡುವೆಟ್ನಾಯರು ಉದ್ಘಾಟಿಸಿ ಮಾತನಾಡುತ್ತಾ ಪ್ರಸ್ತುತ ನಮ್ಮ ದೇಶ , ನಮ್ಮ ಜಿಲ್ಲೆ ,ತಾಲೂಕಿನಲ್ಲಿ  ಜನರಲ್ಲಿ ಧಾರ್ಮಿಕ ಜಾಗೃತಿ  ಮೂಡುತ್ತಿದೆ. ಭಜನೆಯ ಮೂಲಕ ಗ್ರಾಮದ ಮಕ್ಕಳು ಹಾಗೂ ಸಾರ್ವಜನಿಕರ  ಸಂಘಟನೆ ಮಾಡಲು ಸಾಧ್ಯವಿದೆ. ಭಜನಾ ಮಂಡಳಿ  ಇಂತಹ  ಉತ್ತಮ ಧಾರ್ಮಿಕ ಕಾರ್ಯಕ್ರಮ ನಡೆಸಿ ಸಂಘಟನೆ ಬಲಪಡಿಸಲು ದೇವರ ಆಶೀರ್ವದವಿರಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮಾರಂಭದ  ಅಧ್ಯಕ್ಷತೆಯನ್ನು  ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಅಶೋಕ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ಉಜಿರೆಯ ಲಕ್ಷ್ಮಿ ಗ್ರೂಪ್ಸ್ ಮಾಲಕ  ಮೋಹನ್ ಕುಮಾರ್ ,  ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ,, ಶ್ರೀ ಕ್ಷೇ.ಧ.ಗ್ರಾ.ಯೋ ಕನ್ಯಾಡಿ ಒಕ್ಕೂಟದ ಅಧ್ಯಕ್ಷ ಮೋಹನ ಗೌಡ ಮೊದಲಾದವರು  ಉಪಸ್ಥಿತರಿದ್ದರು.

ಸೋನಾಕ್ಷಿ ಕಾರ್ಯಕ್ರಮ ನಿರೂಪಿಸಿ, ಭಜನಾ ಮಂಡಳಿಯ ಸ್ಥಾಪಕಾಧ್ಯಕ್ಷ ಪವನ್ ಶೆಟ್ಟಿ ಸ್ವಾಗತಿಸಿ. ಸ್ಥಾಪಕ ಕಾರ್ಯದರ್ಶಿ ತನಿಯಪ್ಪ ಗೌಡ ಧನ್ಯವಾದವಿತ್ತರು.  ಬಳಿಕ ” ವಿಠ್ಠಲ್ ನಾಯಕ್ ಕಲ್ಲಡ್ಕ ಬಳಗದವರಿಂದ “ಗೀತಾ ಸಾಹಿತ್ಯ ಸಂಭ್ರಮ” ಕಾರ್ಯಕ್ರಮ ನಡೆಯಿತು.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ತಾಯಂದಿರ ದಿನಾಚರಣೆ ಮತ್ತು ಅಭಿನಂದನೋತ್ಸವ

Suddi Udaya

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya
error: Content is protected !!