April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

ನಾವರ:ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಾ.31 ರಂದು ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರವಿರಾಜ ಹೆಗ್ಡೆ ನೇರವೇರಿಸಿ ಮಾತನಾಡಿ ಈ ಭಾಗದ ಎಲ್ಲರ ಸಹಕಾರದಿಂದ ಈ ದೇವಸ್ಥಾನ ಅಭಿವೃದ್ಧಿ ಹೊಂದಿದೆ.ಯುವಕರು ಒಳ್ಳೆಯ ಕೆಲಸ ಮಾಡಿದ್ದಾರೆ. ಎಲ್ಲರಿಗೂ ದೇವರ ಅನುಗ್ರಹ ಸಿಗಲಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯಾಧ್ಯಕ್ಷ ಎನ್.ನಿತ್ಯಾನಂದ ನಾವರ ವಹಿಸಿ ಕ್ಷೇತ್ರದಲ್ಲಿ ನೆಲೆನಿಂತ ಶ್ರೀ ಮಹಾಲಿಂಗೇಶ್ವರನ‌ ಶಕ್ತಿಯಿಂದ ಇಂದು ಊರಲ್ಲಿ ಸುಭೀಕ್ಷೆ ನೆಲೆಸಿದೆ. ಊರ ಸರ್ವ ಬಂಧುಗಳ ಸಹಕಾರದೊಂದಿಗೆ ಕ್ಷೇತ್ರ ಅಭಿವೃದ್ಧಿ ಹೊಂದಿದೆ ಎಂದರು.

ವೇದಿಕೆಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಸುಲ್ಕೇರಿ‌ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ನಿಕಟಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಎಸ್‌.ಕೆ.ಡಿ.ಆರ್.ಡಿ.ಪಿ ಅಳದಂಗಡಿ ವಲಯ ಮೇಲ್ವಿಚಾರಕಿ ಸುಮಂಗಲಾ,ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅದ್ಯಕ್ಷ ಸುಧೀಶ್ ಹೆಗ್ಡೆ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಹೊರೆಕಾಣಿಕೆ ಸಮಿತಿ ಸಂಚಾಲಕಿ ಪುಷ್ಪಾವತಿ ಎನ್ ನಾವರ,ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಜಯಾನಂದ ಕೊರಲ್ಲ ಉಪಸ್ಥಿತರಿದ್ದರು.

ಧನ್ವಿತಾ, ಧನುಶ್ರೀ, ಪ್ರಣೀತಾ ಪ್ರಾರ್ಥನೆ ಹಾಡಿದರು‌.ಸಾಂಸ್ಕೃತಿಕ ಸಮಿತಿ ಸಂಚಾಲಕ ವೀರೇಂದ್ರ ಕುಮಾರ್ ಜೈನ್ ಸ್ವಾಗತಿಸಿದರು.ಕಾರ್ಯದರ್ಶಿ ವಿಜಯ್ ಕುಮಾರ್ ಜೈನ್ ನಿರೂಪಿಸಿದರು.

Related posts

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!