April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು   ಎ 1  ರಂದು ಶ್ರೀ ದೇವರ ಸನ್ನಿಧಿಯಲ್ಲಿ  ಅನಾವರಣಗೊಳಿಸಲಾಯಿತು. 

ಈ ಸಂದರ್ಭದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ  ಬೊಲ್ಮಿಣ್ಣಾಯ ,  ಗಿರಿರಾಜ ಬಾರಿತ್ತಾಯ,ಪ್ರಕಾಶ್ ಬಾರಿತ್ತಾಯ, ಶಶಿಧರ ,ಶ್ರೀ ಲಕ್ಷ್ಮಿ ಜನಾರ್ದನ ಭಜನಾ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.                               

 ಎ 15 ರಂದು  ಮಾಚಾರು ಶ್ರೀ ಲಕ್ಷ್ಮೀಜನಾರ್ದನ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು  ಬ್ರಹ್ಮಶ್ರೀ ಕೊಯ್ಯುರು ನಂದಕುಮಾರ ತಂತ್ರಿಗಳ  ನೇತೃತ್ವದಲ್ಲಿ   ನಡೆಯಲಿದೆ.   ಬೆಳಿಗ್ಗೆ ದೇವತಾ ಪ್ರಾರ್ಥನೆ,ತೋರಣ ಪ್ರತಿಷ್ಠೆ,ಉಗ್ರಾಣ ಮುಹೂರ್ತ,ಗಣಪತಿ ಹೋಮ, ಪಂಚವಿಂಶತಿ  ಕಲಶಾರಾಧನೆ ,ಪ್ರಧಾನ ಹೋಮ, ಕಲಶಾಭಿಷೇಕ,ಮಹಾಪೂಜೆ ಹಾಗೂ  ಅನ್ನಸಂತರ್ಪಣೆ ನಡೆಯಲಿದೆ.  ಸಂಜೆ ಉಜಿರೆಯ ಶ್ರೀ ಜ ನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ ಹಾಗು ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ,ದೇವರ ಉತ್ಸವ, ರಕ್ತೇಶ್ವರಿ ಧರ್ಮದೈವ ನೇಮೋತ್ಸವ   ನಡೆಯಲಿದೆ. ಎ 16 ರಂದು  ಬೆಳಿಗ್ಗೆ ಸಂಪ್ರೋಕ್ಷಣೆ , ಪವಮಾನ  ಅಭಿಷೇಕ ಮತ್ತು ಮಹಾಪೂಜೆ ರಾತ್ರಿ ರಂಗಪೂಜೆ ಮತ್ತು ಮಂತ್ರಾಕ್ಷತೆ ನಡೆಯಲಿದೆ . ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸುವಂತೆ  ದೇವಸ್ಥಾನದ  ಪ್ರಕಟಣೆ ತಿಳಿಸಿದೆ. 

Related posts

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!