30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು   ಎ 1  ರಂದು ಶ್ರೀ ದೇವರ ಸನ್ನಿಧಿಯಲ್ಲಿ  ಅನಾವರಣಗೊಳಿಸಲಾಯಿತು. 

ಈ ಸಂದರ್ಭದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ  ಬೊಲ್ಮಿಣ್ಣಾಯ ,  ಗಿರಿರಾಜ ಬಾರಿತ್ತಾಯ,ಪ್ರಕಾಶ್ ಬಾರಿತ್ತಾಯ, ಶಶಿಧರ ,ಶ್ರೀ ಲಕ್ಷ್ಮಿ ಜನಾರ್ದನ ಭಜನಾ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.                               

 ಎ 15 ರಂದು  ಮಾಚಾರು ಶ್ರೀ ಲಕ್ಷ್ಮೀಜನಾರ್ದನ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು  ಬ್ರಹ್ಮಶ್ರೀ ಕೊಯ್ಯುರು ನಂದಕುಮಾರ ತಂತ್ರಿಗಳ  ನೇತೃತ್ವದಲ್ಲಿ   ನಡೆಯಲಿದೆ.   ಬೆಳಿಗ್ಗೆ ದೇವತಾ ಪ್ರಾರ್ಥನೆ,ತೋರಣ ಪ್ರತಿಷ್ಠೆ,ಉಗ್ರಾಣ ಮುಹೂರ್ತ,ಗಣಪತಿ ಹೋಮ, ಪಂಚವಿಂಶತಿ  ಕಲಶಾರಾಧನೆ ,ಪ್ರಧಾನ ಹೋಮ, ಕಲಶಾಭಿಷೇಕ,ಮಹಾಪೂಜೆ ಹಾಗೂ  ಅನ್ನಸಂತರ್ಪಣೆ ನಡೆಯಲಿದೆ.  ಸಂಜೆ ಉಜಿರೆಯ ಶ್ರೀ ಜ ನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ ಹಾಗು ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ,ದೇವರ ಉತ್ಸವ, ರಕ್ತೇಶ್ವರಿ ಧರ್ಮದೈವ ನೇಮೋತ್ಸವ   ನಡೆಯಲಿದೆ. ಎ 16 ರಂದು  ಬೆಳಿಗ್ಗೆ ಸಂಪ್ರೋಕ್ಷಣೆ , ಪವಮಾನ  ಅಭಿಷೇಕ ಮತ್ತು ಮಹಾಪೂಜೆ ರಾತ್ರಿ ರಂಗಪೂಜೆ ಮತ್ತು ಮಂತ್ರಾಕ್ಷತೆ ನಡೆಯಲಿದೆ . ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸುವಂತೆ  ದೇವಸ್ಥಾನದ  ಪ್ರಕಟಣೆ ತಿಳಿಸಿದೆ. 

Related posts

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!