23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು   ಎ 1  ರಂದು ಶ್ರೀ ದೇವರ ಸನ್ನಿಧಿಯಲ್ಲಿ  ಅನಾವರಣಗೊಳಿಸಲಾಯಿತು. 

ಈ ಸಂದರ್ಭದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ  ಬೊಲ್ಮಿಣ್ಣಾಯ ,  ಗಿರಿರಾಜ ಬಾರಿತ್ತಾಯ,ಪ್ರಕಾಶ್ ಬಾರಿತ್ತಾಯ, ಶಶಿಧರ ,ಶ್ರೀ ಲಕ್ಷ್ಮಿ ಜನಾರ್ದನ ಭಜನಾ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.                               

 ಎ 15 ರಂದು  ಮಾಚಾರು ಶ್ರೀ ಲಕ್ಷ್ಮೀಜನಾರ್ದನ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು  ಬ್ರಹ್ಮಶ್ರೀ ಕೊಯ್ಯುರು ನಂದಕುಮಾರ ತಂತ್ರಿಗಳ  ನೇತೃತ್ವದಲ್ಲಿ   ನಡೆಯಲಿದೆ.   ಬೆಳಿಗ್ಗೆ ದೇವತಾ ಪ್ರಾರ್ಥನೆ,ತೋರಣ ಪ್ರತಿಷ್ಠೆ,ಉಗ್ರಾಣ ಮುಹೂರ್ತ,ಗಣಪತಿ ಹೋಮ, ಪಂಚವಿಂಶತಿ  ಕಲಶಾರಾಧನೆ ,ಪ್ರಧಾನ ಹೋಮ, ಕಲಶಾಭಿಷೇಕ,ಮಹಾಪೂಜೆ ಹಾಗೂ  ಅನ್ನಸಂತರ್ಪಣೆ ನಡೆಯಲಿದೆ.  ಸಂಜೆ ಉಜಿರೆಯ ಶ್ರೀ ಜ ನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ ಹಾಗು ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ,ದೇವರ ಉತ್ಸವ, ರಕ್ತೇಶ್ವರಿ ಧರ್ಮದೈವ ನೇಮೋತ್ಸವ   ನಡೆಯಲಿದೆ. ಎ 16 ರಂದು  ಬೆಳಿಗ್ಗೆ ಸಂಪ್ರೋಕ್ಷಣೆ , ಪವಮಾನ  ಅಭಿಷೇಕ ಮತ್ತು ಮಹಾಪೂಜೆ ರಾತ್ರಿ ರಂಗಪೂಜೆ ಮತ್ತು ಮಂತ್ರಾಕ್ಷತೆ ನಡೆಯಲಿದೆ . ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸುವಂತೆ  ದೇವಸ್ಥಾನದ  ಪ್ರಕಟಣೆ ತಿಳಿಸಿದೆ. 

Related posts

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya
error: Content is protected !!