24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

ಬೆಳ್ತಂಗಡಿ; ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ಸೂಳಬೆಟ್ಟು ಇದರ ವತಿಯಿಂದ ಅಳದಂಗಡಿ ಸನಿಹದ ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಮಾ.30 ರಂದು ಸಂಜೆ ನೃತ್ಯ ಭಜನೋತ್ಸವ ನೆರವೇರಿತು.


ದೇವಳದ ಅರ್ಚಕ ಭಾರ್ಗವ ಮರಾಠೆ ಜ್ಯೋತಿ ಪ್ರಜ್ವಾಲನೆ ಮಾಡುವ ಮೂಲಕ ಕುಣಿತ ಭಜನೆಗೆ ಚಾಲನೆ ನೀಡಿದರು.

ಕುಣಿತ ಭಜನೆಯ ತರಬೇತುದಾರ ಸಂದೇಶ ಮದ್ದಡ್ಕ ಇವರಿಂದ ತರಬೇತು ಪಡೆದ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ 23 ವಿವಿಧ ಭಜನಾ ಮಂಡಳಿಗಳ 600 ಭಜಕರ ನೃತ್ಯವು ಭಕ್ತಿಯ ಸಂಚಲನಕ್ಕೆ ಕಾರಣವಾಯಿತು. ಉಜಿರೆಯ ಗಾನಸುರಭಿ ತಂಡದವರು ಹಾಡಿದ ಭಜನೆಗಳು ನೃತ್ಯ ಸಂಯೋಜನೆಗೆ ಮತ್ತಷ್ಟು ಮೆರುಗನ್ನು ನೀಡಿತು.


ದಂತ ವೈದ್ಯ ಡಾ| ಶಶಿಧರ ಡೋಂಗ್ರೆ ಹಾಗೂ ಪ್ರಗತಿಪರ ಕೃಷಿಕ ನಿರಂಜನ ಜೋಶಿ ಅವರು ಭಜನಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿಯನ್ನು ನೀಡಿ ಗೌರವಿಸಿದರು. ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಉಪಸ್ಥಿತರಿದ್ದರು. ಮಂಡಳಿಗಳಿಗೆ, ದಾನಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ತೋಟದಪಲ್ಕೆಯ ನಿವಾಸಿ ಲಕ್ಷ್ಮೀ ಹಾಗೂ ಬರಾಯದ ವಿದ್ಯಾರ್ಥಿ ರವಿ ಎಂಬುವರಿಗೆ ಮಂಡಳಿ ವತಿಯಿಂದ ನೆರವನ್ನು ನೀಡಲಾಯಿತು.

ಸೂಳಬೆಟ್ಟು ಸ,ಕಿ.ಪ್ರಾ.ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ಮತ್ತು ಬಳಗದವರ ನೇತೃತ್ವದಲ್ಲಿ ನಡೆದ ಭಜನಾ ಕಮ್ಮಟದಲ್ಲಿ ರಾಮ್ ಕುಮಾರ್ ಮಾರ್ನಾಡು ಕಾರ್ಯಕ್ರಮ ನಿರ್ವಹಿಸಿದರು.

Related posts

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!