22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

ಬೆಳ್ತಂಗಡಿ; ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ಸೂಳಬೆಟ್ಟು ಇದರ ವತಿಯಿಂದ ಅಳದಂಗಡಿ ಸನಿಹದ ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಮಾ.30 ರಂದು ಸಂಜೆ ನೃತ್ಯ ಭಜನೋತ್ಸವ ನೆರವೇರಿತು.


ದೇವಳದ ಅರ್ಚಕ ಭಾರ್ಗವ ಮರಾಠೆ ಜ್ಯೋತಿ ಪ್ರಜ್ವಾಲನೆ ಮಾಡುವ ಮೂಲಕ ಕುಣಿತ ಭಜನೆಗೆ ಚಾಲನೆ ನೀಡಿದರು.

ಕುಣಿತ ಭಜನೆಯ ತರಬೇತುದಾರ ಸಂದೇಶ ಮದ್ದಡ್ಕ ಇವರಿಂದ ತರಬೇತು ಪಡೆದ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ 23 ವಿವಿಧ ಭಜನಾ ಮಂಡಳಿಗಳ 600 ಭಜಕರ ನೃತ್ಯವು ಭಕ್ತಿಯ ಸಂಚಲನಕ್ಕೆ ಕಾರಣವಾಯಿತು. ಉಜಿರೆಯ ಗಾನಸುರಭಿ ತಂಡದವರು ಹಾಡಿದ ಭಜನೆಗಳು ನೃತ್ಯ ಸಂಯೋಜನೆಗೆ ಮತ್ತಷ್ಟು ಮೆರುಗನ್ನು ನೀಡಿತು.


ದಂತ ವೈದ್ಯ ಡಾ| ಶಶಿಧರ ಡೋಂಗ್ರೆ ಹಾಗೂ ಪ್ರಗತಿಪರ ಕೃಷಿಕ ನಿರಂಜನ ಜೋಶಿ ಅವರು ಭಜನಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿಯನ್ನು ನೀಡಿ ಗೌರವಿಸಿದರು. ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಉಪಸ್ಥಿತರಿದ್ದರು. ಮಂಡಳಿಗಳಿಗೆ, ದಾನಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ತೋಟದಪಲ್ಕೆಯ ನಿವಾಸಿ ಲಕ್ಷ್ಮೀ ಹಾಗೂ ಬರಾಯದ ವಿದ್ಯಾರ್ಥಿ ರವಿ ಎಂಬುವರಿಗೆ ಮಂಡಳಿ ವತಿಯಿಂದ ನೆರವನ್ನು ನೀಡಲಾಯಿತು.

ಸೂಳಬೆಟ್ಟು ಸ,ಕಿ.ಪ್ರಾ.ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ಮತ್ತು ಬಳಗದವರ ನೇತೃತ್ವದಲ್ಲಿ ನಡೆದ ಭಜನಾ ಕಮ್ಮಟದಲ್ಲಿ ರಾಮ್ ಕುಮಾರ್ ಮಾರ್ನಾಡು ಕಾರ್ಯಕ್ರಮ ನಿರ್ವಹಿಸಿದರು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya
error: Content is protected !!