ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

Updated on:

ಬೆಳ್ತಂಗಡಿ : ಕಳಿಯ ಗ್ರಾಮ ದ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ ಮಾ.30 ರಂದು ಭಜನಾ ಮಂಡಳಿ ವಠಾರದಲ್ಲಿ ಜರುಗಿತು.
ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ ಪೆರಾಜೆ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.


ಗೇರುಕಟ್ಟೆ ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ, ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ತಂಡದ ಸದಸ್ಯರಿಂದ ಭಜನೆ ಮತ್ತು ಮಹಾ ಪೂಜೆ, ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.


ತಾಲೂಕು ಭಜನಾ ಪರಿಷತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯನ್ ಕೊಯ್ಯೂರು, ವಿವಿಧ ಸಂಘದ ಪದಾಧಿಕಾರಿಗಳು, ಭಜನಾ ಮಂಡಳಿ ಸದಸ್ಯರು ಹಾಗೂ ಸ್ಥಳೀಯ ಭಕ್ತರು ಉಪಸ್ಥಿತರಿದ್ದರು..
ಭಜನಾ ಮಂಡಳಿ ಗೌರವಾಧ್ಯಕ್ಷ ಚೆನ್ನಪ್ಪ ಗೌಡ, ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಲೋಹಿತಾಶ್ವ ಗೌಡ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Leave a Comment

error: Content is protected !!