September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು   ಎ 1  ರಂದು ಶ್ರೀ ದೇವರ ಸನ್ನಿಧಿಯಲ್ಲಿ  ಅನಾವರಣಗೊಳಿಸಲಾಯಿತು. 

ಈ ಸಂದರ್ಭದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ  ಬೊಲ್ಮಿಣ್ಣಾಯ ,  ಗಿರಿರಾಜ ಬಾರಿತ್ತಾಯ,ಪ್ರಕಾಶ್ ಬಾರಿತ್ತಾಯ, ಶಶಿಧರ ,ಶ್ರೀ ಲಕ್ಷ್ಮಿ ಜನಾರ್ದನ ಭಜನಾ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.                               

 ಎ 15 ರಂದು  ಮಾಚಾರು ಶ್ರೀ ಲಕ್ಷ್ಮೀಜನಾರ್ದನ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು  ಬ್ರಹ್ಮಶ್ರೀ ಕೊಯ್ಯುರು ನಂದಕುಮಾರ ತಂತ್ರಿಗಳ  ನೇತೃತ್ವದಲ್ಲಿ   ನಡೆಯಲಿದೆ.   ಬೆಳಿಗ್ಗೆ ದೇವತಾ ಪ್ರಾರ್ಥನೆ,ತೋರಣ ಪ್ರತಿಷ್ಠೆ,ಉಗ್ರಾಣ ಮುಹೂರ್ತ,ಗಣಪತಿ ಹೋಮ, ಪಂಚವಿಂಶತಿ  ಕಲಶಾರಾಧನೆ ,ಪ್ರಧಾನ ಹೋಮ, ಕಲಶಾಭಿಷೇಕ,ಮಹಾಪೂಜೆ ಹಾಗೂ  ಅನ್ನಸಂತರ್ಪಣೆ ನಡೆಯಲಿದೆ.  ಸಂಜೆ ಉಜಿರೆಯ ಶ್ರೀ ಜ ನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ ಹಾಗು ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ,ದೇವರ ಉತ್ಸವ, ರಕ್ತೇಶ್ವರಿ ಧರ್ಮದೈವ ನೇಮೋತ್ಸವ   ನಡೆಯಲಿದೆ. ಎ 16 ರಂದು  ಬೆಳಿಗ್ಗೆ ಸಂಪ್ರೋಕ್ಷಣೆ , ಪವಮಾನ  ಅಭಿಷೇಕ ಮತ್ತು ಮಹಾಪೂಜೆ ರಾತ್ರಿ ರಂಗಪೂಜೆ ಮತ್ತು ಮಂತ್ರಾಕ್ಷತೆ ನಡೆಯಲಿದೆ . ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸುವಂತೆ  ದೇವಸ್ಥಾನದ  ಪ್ರಕಟಣೆ ತಿಳಿಸಿದೆ. 

Related posts

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya
error: Content is protected !!