25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು   ಎ 1  ರಂದು ಶ್ರೀ ದೇವರ ಸನ್ನಿಧಿಯಲ್ಲಿ  ಅನಾವರಣಗೊಳಿಸಲಾಯಿತು. 

ಈ ಸಂದರ್ಭದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ  ಬೊಲ್ಮಿಣ್ಣಾಯ ,  ಗಿರಿರಾಜ ಬಾರಿತ್ತಾಯ,ಪ್ರಕಾಶ್ ಬಾರಿತ್ತಾಯ, ಶಶಿಧರ ,ಶ್ರೀ ಲಕ್ಷ್ಮಿ ಜನಾರ್ದನ ಭಜನಾ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.                               

 ಎ 15 ರಂದು  ಮಾಚಾರು ಶ್ರೀ ಲಕ್ಷ್ಮೀಜನಾರ್ದನ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು  ಬ್ರಹ್ಮಶ್ರೀ ಕೊಯ್ಯುರು ನಂದಕುಮಾರ ತಂತ್ರಿಗಳ  ನೇತೃತ್ವದಲ್ಲಿ   ನಡೆಯಲಿದೆ.   ಬೆಳಿಗ್ಗೆ ದೇವತಾ ಪ್ರಾರ್ಥನೆ,ತೋರಣ ಪ್ರತಿಷ್ಠೆ,ಉಗ್ರಾಣ ಮುಹೂರ್ತ,ಗಣಪತಿ ಹೋಮ, ಪಂಚವಿಂಶತಿ  ಕಲಶಾರಾಧನೆ ,ಪ್ರಧಾನ ಹೋಮ, ಕಲಶಾಭಿಷೇಕ,ಮಹಾಪೂಜೆ ಹಾಗೂ  ಅನ್ನಸಂತರ್ಪಣೆ ನಡೆಯಲಿದೆ.  ಸಂಜೆ ಉಜಿರೆಯ ಶ್ರೀ ಜ ನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ ಹಾಗು ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ,ದೇವರ ಉತ್ಸವ, ರಕ್ತೇಶ್ವರಿ ಧರ್ಮದೈವ ನೇಮೋತ್ಸವ   ನಡೆಯಲಿದೆ. ಎ 16 ರಂದು  ಬೆಳಿಗ್ಗೆ ಸಂಪ್ರೋಕ್ಷಣೆ , ಪವಮಾನ  ಅಭಿಷೇಕ ಮತ್ತು ಮಹಾಪೂಜೆ ರಾತ್ರಿ ರಂಗಪೂಜೆ ಮತ್ತು ಮಂತ್ರಾಕ್ಷತೆ ನಡೆಯಲಿದೆ . ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸುವಂತೆ  ದೇವಸ್ಥಾನದ  ಪ್ರಕಟಣೆ ತಿಳಿಸಿದೆ. 

Related posts

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya
error: Content is protected !!