23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು   ಎ 1  ರಂದು ಶ್ರೀ ದೇವರ ಸನ್ನಿಧಿಯಲ್ಲಿ  ಅನಾವರಣಗೊಳಿಸಲಾಯಿತು. 

ಈ ಸಂದರ್ಭದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ  ಬೊಲ್ಮಿಣ್ಣಾಯ ,  ಗಿರಿರಾಜ ಬಾರಿತ್ತಾಯ,ಪ್ರಕಾಶ್ ಬಾರಿತ್ತಾಯ, ಶಶಿಧರ ,ಶ್ರೀ ಲಕ್ಷ್ಮಿ ಜನಾರ್ದನ ಭಜನಾ ಮಂಡಳಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.                               

 ಎ 15 ರಂದು  ಮಾಚಾರು ಶ್ರೀ ಲಕ್ಷ್ಮೀಜನಾರ್ದನ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು  ಬ್ರಹ್ಮಶ್ರೀ ಕೊಯ್ಯುರು ನಂದಕುಮಾರ ತಂತ್ರಿಗಳ  ನೇತೃತ್ವದಲ್ಲಿ   ನಡೆಯಲಿದೆ.   ಬೆಳಿಗ್ಗೆ ದೇವತಾ ಪ್ರಾರ್ಥನೆ,ತೋರಣ ಪ್ರತಿಷ್ಠೆ,ಉಗ್ರಾಣ ಮುಹೂರ್ತ,ಗಣಪತಿ ಹೋಮ, ಪಂಚವಿಂಶತಿ  ಕಲಶಾರಾಧನೆ ,ಪ್ರಧಾನ ಹೋಮ, ಕಲಶಾಭಿಷೇಕ,ಮಹಾಪೂಜೆ ಹಾಗೂ  ಅನ್ನಸಂತರ್ಪಣೆ ನಡೆಯಲಿದೆ.  ಸಂಜೆ ಉಜಿರೆಯ ಶ್ರೀ ಜ ನಾರ್ದನ ಸ್ವಾಮಿ ಭಗಿನಿ ಭಜನಾ ಮಂಡಳಿ ಹಾಗು ಮಾಚಾರು ಶ್ರೀ ಲಕ್ಷ್ಮೀಜನಾರ್ದನ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ರಾತ್ರಿ ರಂಗಪೂಜೆ,ದೇವರ ಉತ್ಸವ, ರಕ್ತೇಶ್ವರಿ ಧರ್ಮದೈವ ನೇಮೋತ್ಸವ   ನಡೆಯಲಿದೆ. ಎ 16 ರಂದು  ಬೆಳಿಗ್ಗೆ ಸಂಪ್ರೋಕ್ಷಣೆ , ಪವಮಾನ  ಅಭಿಷೇಕ ಮತ್ತು ಮಹಾಪೂಜೆ ರಾತ್ರಿ ರಂಗಪೂಜೆ ಮತ್ತು ಮಂತ್ರಾಕ್ಷತೆ ನಡೆಯಲಿದೆ . ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸುವಂತೆ  ದೇವಸ್ಥಾನದ  ಪ್ರಕಟಣೆ ತಿಳಿಸಿದೆ. 

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya
error: Content is protected !!