September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

ಲಾಯಿಲ: ಶ್ರೀ ಕ್ಷೇತ್ರ ಪಿಲಿಪಂಜರ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು , ಮೂಲ ಮೈಸಂದಾಯ, ಸ್ಥಳ ದೈವ ಪಂಜುರ್ಲಿ ಹಾಗೂ ದೈವರಾಜೆ ಗುಳಿಗ ದೈವಗಳ ಸಾನಿಧ್ಯ ಇಲ್ಲಿಯ ಪ್ರತಿಷ್ಠಾ ದಿನ ಮತ್ತು ದೈವಗಳ ನೇಮೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕಡೆಶಿವಾಲಯ ವೇದಮೂರ್ತ ಪಚ್ಚಾಡಿಬೈಲು ಪಿ. ಸುಬ್ರಹ್ಮಣ್ಯ ತಂತ್ರಿಗಳ ಪೌರೋಹಿತ್ಯದಲ್ಲಿ ಮಾ.31ರಂದು ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ತೋರಣ ಮುಹೂರ್ತ, ದೇವತಾ ಪ್ರಾರ್ಥನೆ, ಸ್ವಸ್ತಿ ಪಂಚಗವ್ಯ ಪುಣ್ಯಾಹವಾಚನ, ಗಣಪತಿಹೋಮ, ಶ್ರೀ ದೈವಗಳಿಗೆ ನವಕ ಕಲಶಾರಾಧನೆ, ನಂತರ ಕಲಶಾಭಿಷೇಕ, ಅಲಂಕಾರ ಪೂಜೆ, ಮಧ್ಯಾಹ್ನ ಪರ್ವಾದಿ ಸೇವೆಗಳು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು , ಮೂಲ ಮೈಸಂದಾಯ, ಸ್ಥಳ ದೈವ ಪಂಜುರ್ಲಿ ಹಾಗೂ ದೈವರಾಜೆ ಗುಳಿಗ
ದೈವಗಳ ನೇಮೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಗೌರವ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರು. ಅಧ್ಯಕ್ಷ ಸುರೇಶ್ ಬರಮೇಲು, ಪ್ರಧಾನ ಕಾರ್ಯದರ್ಶಿ ಸುಧಾಕರ್ ಬಿ ಎಲ್, ಕಾರ್ಯದರ್ಶಿ ಪುಷ್ಪರಾಜ್ ಲಾಯಿಲ, ಕೋಶಾಧಿಕಾರಿ ಲಕ್ಷ್ಮಣ್ ಜಿ.ಎನ್, ಉಪಾಧ್ಯಕ್ಷರುಗಳಾದ ಸೀತಾರಾಮ ಹೆಗ್ಡೆ, ಶ್ರೀಮತಿ ಲಕ್ಷ್ಮಿ ರವಿಕುಮಾರ್, ಜೊತೆ ಕಾರ್ಯದರ್ಶಿಗಳಾದ ಶ್ರೀಮತಿ ಉಷಾ ಗೋಕುಲ್ ದಾಸ್, ಅನಿಲ್ ಕಕ್ಕೆನಾ,
ವಿವಿಧ ಸಮಿತಿಯ ಸಂಚಾಲಕರು ಮತ್ತು ಸರ್ವ ಸದಸ್ಯರು ಹಾಒಗೂ ಊರವರು ಉಪಸ್ಥಿತರಿದ್ದರು.

Related posts

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!