22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಬೆಳ್ತಂಗಡಿ: ಕೃಷಿಕ್ ಸರ್ವೋದಯ ಪೌಂಡೇಶನ್ (ರಿ) ಬೆಂಗಳೂರು, ಹಾಸನ ಶಾಖಾ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳಂತೆ ಒಟ್ಟು ಐದು ಲಕ್ಷ ಹಾಗೂ ಒರ್ವ ವಿದ್ಯಾರ್ಥಿನಿಗೆ ಇಪ್ಪತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷರಾದ ಎಚ್ ಪದ್ಮ ಗೌಡ, ಅಧ್ಯಕ್ಷರಾದ ಕುಶಾಲಪ್ಪ ಗೌಡ, ಕಾರ್ಯದರ್ಶಿಗಳಾದ ಗಣೇಶ್ ಗೌಡ ಹಾಗೂ ಕೋಶಾಧಿಕಾರಿಗಳಾದ ಯುವರಾಜ್ ಅನಾರ್ ಇವರುಗಳು ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ ಮಾಡಿದರು. ಪ್ರತಿ ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಬಡ ಕೃಷಿಕ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರಸಾದ್ ಕುಮಾರ್ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya
error: Content is protected !!