September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಬೆಳ್ತಂಗಡಿ: ಕೃಷಿಕ್ ಸರ್ವೋದಯ ಪೌಂಡೇಶನ್ (ರಿ) ಬೆಂಗಳೂರು, ಹಾಸನ ಶಾಖಾ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳಂತೆ ಒಟ್ಟು ಐದು ಲಕ್ಷ ಹಾಗೂ ಒರ್ವ ವಿದ್ಯಾರ್ಥಿನಿಗೆ ಇಪ್ಪತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷರಾದ ಎಚ್ ಪದ್ಮ ಗೌಡ, ಅಧ್ಯಕ್ಷರಾದ ಕುಶಾಲಪ್ಪ ಗೌಡ, ಕಾರ್ಯದರ್ಶಿಗಳಾದ ಗಣೇಶ್ ಗೌಡ ಹಾಗೂ ಕೋಶಾಧಿಕಾರಿಗಳಾದ ಯುವರಾಜ್ ಅನಾರ್ ಇವರುಗಳು ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ ಮಾಡಿದರು. ಪ್ರತಿ ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಬಡ ಕೃಷಿಕ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರಸಾದ್ ಕುಮಾರ್ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya
error: Content is protected !!