23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

ಬೆಳ್ತಂಗಡಿ; ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ಸೂಳಬೆಟ್ಟು ಇದರ ವತಿಯಿಂದ ಅಳದಂಗಡಿ ಸನಿಹದ ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಮಾ.30 ರಂದು ಸಂಜೆ ನೃತ್ಯ ಭಜನೋತ್ಸವ ನೆರವೇರಿತು.


ದೇವಳದ ಅರ್ಚಕ ಭಾರ್ಗವ ಮರಾಠೆ ಜ್ಯೋತಿ ಪ್ರಜ್ವಾಲನೆ ಮಾಡುವ ಮೂಲಕ ಕುಣಿತ ಭಜನೆಗೆ ಚಾಲನೆ ನೀಡಿದರು.

ಕುಣಿತ ಭಜನೆಯ ತರಬೇತುದಾರ ಸಂದೇಶ ಮದ್ದಡ್ಕ ಇವರಿಂದ ತರಬೇತು ಪಡೆದ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ 23 ವಿವಿಧ ಭಜನಾ ಮಂಡಳಿಗಳ 600 ಭಜಕರ ನೃತ್ಯವು ಭಕ್ತಿಯ ಸಂಚಲನಕ್ಕೆ ಕಾರಣವಾಯಿತು. ಉಜಿರೆಯ ಗಾನಸುರಭಿ ತಂಡದವರು ಹಾಡಿದ ಭಜನೆಗಳು ನೃತ್ಯ ಸಂಯೋಜನೆಗೆ ಮತ್ತಷ್ಟು ಮೆರುಗನ್ನು ನೀಡಿತು.


ದಂತ ವೈದ್ಯ ಡಾ| ಶಶಿಧರ ಡೋಂಗ್ರೆ ಹಾಗೂ ಪ್ರಗತಿಪರ ಕೃಷಿಕ ನಿರಂಜನ ಜೋಶಿ ಅವರು ಭಜನಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿಯನ್ನು ನೀಡಿ ಗೌರವಿಸಿದರು. ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಉಪಸ್ಥಿತರಿದ್ದರು. ಮಂಡಳಿಗಳಿಗೆ, ದಾನಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ತೋಟದಪಲ್ಕೆಯ ನಿವಾಸಿ ಲಕ್ಷ್ಮೀ ಹಾಗೂ ಬರಾಯದ ವಿದ್ಯಾರ್ಥಿ ರವಿ ಎಂಬುವರಿಗೆ ಮಂಡಳಿ ವತಿಯಿಂದ ನೆರವನ್ನು ನೀಡಲಾಯಿತು.

ಸೂಳಬೆಟ್ಟು ಸ,ಕಿ.ಪ್ರಾ.ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ಮತ್ತು ಬಳಗದವರ ನೇತೃತ್ವದಲ್ಲಿ ನಡೆದ ಭಜನಾ ಕಮ್ಮಟದಲ್ಲಿ ರಾಮ್ ಕುಮಾರ್ ಮಾರ್ನಾಡು ಕಾರ್ಯಕ್ರಮ ನಿರ್ವಹಿಸಿದರು.

Related posts

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya
error: Content is protected !!