July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

ಬೆಳ್ತಂಗಡಿ; ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ಸೂಳಬೆಟ್ಟು ಇದರ ವತಿಯಿಂದ ಅಳದಂಗಡಿ ಸನಿಹದ ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಮಾ.30 ರಂದು ಸಂಜೆ ನೃತ್ಯ ಭಜನೋತ್ಸವ ನೆರವೇರಿತು.


ದೇವಳದ ಅರ್ಚಕ ಭಾರ್ಗವ ಮರಾಠೆ ಜ್ಯೋತಿ ಪ್ರಜ್ವಾಲನೆ ಮಾಡುವ ಮೂಲಕ ಕುಣಿತ ಭಜನೆಗೆ ಚಾಲನೆ ನೀಡಿದರು.

ಕುಣಿತ ಭಜನೆಯ ತರಬೇತುದಾರ ಸಂದೇಶ ಮದ್ದಡ್ಕ ಇವರಿಂದ ತರಬೇತು ಪಡೆದ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ 23 ವಿವಿಧ ಭಜನಾ ಮಂಡಳಿಗಳ 600 ಭಜಕರ ನೃತ್ಯವು ಭಕ್ತಿಯ ಸಂಚಲನಕ್ಕೆ ಕಾರಣವಾಯಿತು. ಉಜಿರೆಯ ಗಾನಸುರಭಿ ತಂಡದವರು ಹಾಡಿದ ಭಜನೆಗಳು ನೃತ್ಯ ಸಂಯೋಜನೆಗೆ ಮತ್ತಷ್ಟು ಮೆರುಗನ್ನು ನೀಡಿತು.


ದಂತ ವೈದ್ಯ ಡಾ| ಶಶಿಧರ ಡೋಂಗ್ರೆ ಹಾಗೂ ಪ್ರಗತಿಪರ ಕೃಷಿಕ ನಿರಂಜನ ಜೋಶಿ ಅವರು ಭಜನಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಹಾಗೂ ಲೇಖನಿಯನ್ನು ನೀಡಿ ಗೌರವಿಸಿದರು. ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಉಪಸ್ಥಿತರಿದ್ದರು. ಮಂಡಳಿಗಳಿಗೆ, ದಾನಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ತೋಟದಪಲ್ಕೆಯ ನಿವಾಸಿ ಲಕ್ಷ್ಮೀ ಹಾಗೂ ಬರಾಯದ ವಿದ್ಯಾರ್ಥಿ ರವಿ ಎಂಬುವರಿಗೆ ಮಂಡಳಿ ವತಿಯಿಂದ ನೆರವನ್ನು ನೀಡಲಾಯಿತು.

ಸೂಳಬೆಟ್ಟು ಸ,ಕಿ.ಪ್ರಾ.ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಪ್ರಮೋದ ಪೂಜಾರಿ ಮತ್ತು ಬಳಗದವರ ನೇತೃತ್ವದಲ್ಲಿ ನಡೆದ ಭಜನಾ ಕಮ್ಮಟದಲ್ಲಿ ರಾಮ್ ಕುಮಾರ್ ಮಾರ್ನಾಡು ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಚಿದಾನಂದ ಇಡ್ಯ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಆಯ್ಕೆ

Suddi Udaya
error: Content is protected !!