September 6, 2026
ಪ್ರಮುಖ ಸುದ್ದಿಬೆಳ್ತಂಗಡಿ

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

ಕೊಕ್ಕಡ: ಸೌತಡ್ಕ ಗಣೇಶ ಕಲಾಮಂದಿರದಲ್ಲಿ ಜರುಗಿದ ಚುನಾವಣಾ ಆಯೋಗದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರು ಮಾಶಾಸನ ಹಾಗೂ ಹಕ್ಕುಪತ್ರ ನೀಡದಿರುವುದಕ್ಕೆ ಹಾಗೂ ಅಧಿಕಾರಿಗಳ ವೈಫಲ್ಯದ ಕಾರಣವನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಬಹಿಷ್ಕರಿಸಿದರು.

ಸಭೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರ ಸುಮಾರು 400 ಜನರಿಗೆ ಮಾಶಸನ ಸ್ಥಗಿತಗೊಂಡಿದ್ದು ಯುಐಡಿ ಕಾರ್ಡ್ ದೊರೆಯದೆ ಇರುವುದರಿಂದ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಹಲವು ವರ್ಷಗಳಿಂದ ಅಕ್ರಮ ಸಕ್ರಮ ವಿತರಿಸದೆ ಎಂಡೋಸಲ್ಫಾನ್ ಸಂತ್ರಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ತಿಳಿಸಿದರು.

ನಂತರ ತುಕ್ರಪ್ಪ ಶೆಟ್ಟಿಯರವರ ದರೋಡೆಯ ಸಂದರ್ಭದಲ್ಲಿ ಅವರಿಗೆ ಬಂದೂಕನ್ನು ಇರಿಸಿಕೊಳ್ಳಲು ಮನೆಯಲ್ಲಿ ವಿನಾಯಿತಿಯನ್ನು ನೀಡಿದಂತೆ ಈ ಸರಿಯೂ ಅವರಿಗೆ ವಿನಾಯತಿ ನೀಡಬೇಕೆಂದು ಕೇಳಿಕೊಂಡಿದ್ದರು ವಿನಾಯತಿ ನೀಡದಿರುವುದಕ್ಕೆ ಅಕ್ರೋಶ ವ್ಯಕ್ತಪಡಿಸಿದರು. ಮತ್ತು 86 ವರ್ಷದ ದಾಟಿದ ಮತ್ತು ವಿಕಲಚೇತನರರಿಗೆ ಮನೆಯಿಂದಲೇ ಓಟನ್ನು ಹಾಕುವುದರಲ್ಲಿ ಅವಕಾಶ ನೀಡದಿರುವುದರ ಕುರಿತು ಅಕ್ರೋಶ ವ್ಯಕ್ತಪಡಿಸಿದರು.

ಎಂಡೋಸಲ್ಫಾನ್ ಹೋರಾಟಗಾರರು ನಮ್ಮ ಹೋರಾಟ ಚುನಾವಣಾ ಬಹಿಷ್ಕಾರವು ಪ್ರತಿನಿಧಿಗಳ ವಿರುದ್ಧ ಅಲ್ಲ ದ.ಕ ಜಿಲ್ಲಾಡಳಿತ ವಿರುದ್ಧ ಆಗಿರುತ್ತದೆ. ಎಂಡೋಸಲ್ಫಾನ್ ರಿಗೆ ಮಾಶಾಸನ ಹಾಗೂ ಹಕ್ಕುಪತ್ರಗಳು ಇತ್ಯಾದಿಗಳು ನೀಡದಿರುವುದಕ್ಕೆ ಇದು ಅಧಿಕಾರ ವೈಫಲ್ಯವಾಗಿರುವುದರಿಂದ ಅಧಿಕಾರಿಗಳ ವೈಫಲ್ಯದ ಕಾರಣವಾಗಿದೆ ಎಂಡೋಸಲ್ಫಾನ್ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ ಕೆಂಗುಡೇಲು ಎಂದರು.

ಬೆಂಗಳೂರು ಚುನಾವಣಾ ಆಯೋಗದ ನೋಡೆಲ್ ಅಧಿಕಾರಿ ವಸ್ತ್ರದ್ ಮಾತನಾಡಿ ಎಂಡೋಸಲ್ಫಾನರ ಮಾಶಾಸನ ಕುರಿತು ಬೆಂಗಳೂರು ಹಾಗೂ ಮಂಗಳೂರು ಮಟ್ಟದಲ್ಲಿ ಸಂಪರ್ಕಿಸಿ ನ್ಯಾಯ ಕೊಡಿಸುವುದಾಗಿ ಹಾಗೂ ನಿಯಾಮಾನುಸಾರ ಯಾರಿಗೆ ಓಟು ಹಾಕಲು ಆಗುವುದಿಲ್ಲ ಅವರಿಗೆ ಮನೆಯಲ್ಲಿಯೇ ಕಲ್ಪಿಸಿಕೊಡುವಂತಹ ಭರವಸೆ ಕೊಟ್ಟರು. ನಂತರ ಚುನಾವಣಾ ಬಹಿಷ್ಕಾರ ಮಾಡದಂತೆ ಅವರು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ವೈಜಣ್ಣ , ತಾ.ಪಂ. ಅಧೀಕ್ಷಕ ಪ್ರಶಾಂತ್ ಡಿ., ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿ ಪ್ರಮೀಳಾ ರಾವ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಅಭಿವೃದ್ಧಿ ಅಧಿಕಾರಿಯಾಗಿ ರಶ್ಮಿ ಬಿ.ಪಿ. ವರ್ಗಾವಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya
error: Content is protected !!