35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 07 ರಿಂದ ಪ್ರಾರಂಭಗೊAಡು 17ರವರೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶಶಿಧರ್ ಶೆಟ್ಟಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವವು ನಡೆಯಲಿದೆ.


ಇದರ ಪೂರ್ವಭಾವಿಯಾಗಿ ಇಂದು (ಎ02) ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಉದಯ ಪಾಂಗಾಣ್ಣಯರವರ ನೇತೃತ್ವದಲ್ಲಿ ಸಂಜೆ 4 ಗಂಟೆಯಿಂದ ದೇವರ ಸನ್ನಿಧಿಯಲ್ಲಿ ಮತ್ತು ನಾಗರಕಟ್ಟೆಯಲ್ಲಿ ರಾಕ್ಷೋಘ್ನ ಹೋಮ, ವಾಸ್ತು ಹೋಮ, ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀ ಶಾಸ್ತಾ ಹಾಗೂ ದೈವಗಳ ಅಧಿವಾಸ ಹೋಮಗಳು ನಡೆಯಲಿದೆ.


ಎ.03 ಬುಧವಾರ ಬೆಳಿಗ್ಗೆ 09-19ರ ವೃಷಭ ಲಗ್ನದಲ್ಲಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀ ಶಾಸ್ತಾ ದೇವರ, ಶ್ರೀ ನಾಗ ದೇವರ , ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಅದೇ ರೀತಿ ಸಂಜೆ 7.30 ರಿಂದ ಯಕ್ಷ ಬಿಂದು ಹವ್ಯಾಸಿ ಯಕ್ಷಗಾನ ತಂಡ ಉಜಿರೆ ಕಲಾವಿದರಿಂದ ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ನಡೆಯಲಿದೆ.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya
error: Content is protected !!