22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಏಕಗವಾಕ್ಷಿ ಪದ್ಧತಿ ತಂಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಏ.2ರಂದು ಆತ್ಮಹತ್ಯೆಗೆ ಯತ್ನಿಸಿದ್ದು, ಜಿಲ್ಲಾಸ್ಪತ್ರೆ ವೆನ್‌ಲಾಕ್‌ಗೆ ದಾಖಲಿಸಲಾಗಿದೆ.

ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. 2019ರಿಂದ ಬೆಳ್ತಂಗಡಿಯ ಕಡಿರುದ್ಯಾವರ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ಇಂದು ಆತ್ಮಹತ್ಯೆಗೆ ಯತ್ನಿಸಿದ, ಇವರನ್ನು ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ನಿಗಾವಣಿಗಾಗಿ ಇವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

ಇವರು ಗುರುವಾಯನಕೆರೆ ಸಮೀಪದ ಪಣೆಜಾಲು ನಿವಾಸಿಯಾಗಿದ್ದಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಪಂಚಾಯತ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಅವರ ಚಿಕಿತ್ಸೆಗೆ ನೆರವಾಗಿದ್ದಾರೆ.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು.

Related posts

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya
error: Content is protected !!