24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ಮುಳಿಯ ಇವರು ಆಫ್ರಿಕಾದ ಟುನಿಷಿಯದ ಟುನಿಷಿಯ ಅಸೋಸಿಯೇಷನ್‌ ಫಾರ್ ದಿ ಪ್ಯೂಚರ್ ಆಫ್ ಸೈನ್ಸ್ ಟೆಕ್ನಾಲಜಿ ((ATAST – Tunisia Association for the fu- ture of Science & Technology)) I-FEST TOP 10 WINNER ವತಿಯಿಂದ ನಡೆಸಲಾದ I-FEST ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಟಾಪ್‌ಟೆನ್‌ ಪ್ರೆಸೆಂಟೇಷನ್‌ಗೆ ಅವಕಾಶ ಪಡೆದು ಇದೀಗ ಗ್ರಾಂಡ್ ಗೋಲ್ಡ್ ಮೆಡಲ್ ಬಹುಮಾನಕ್ಕೆ ಭಾಜನರಾಗಿದ್ದಾರೆ. ಟುನಿಷಿಯದಲ್ಲಿ ನಡೆದ ಸಮಾರಂಭದಲ್ಲಿ, ಅಸೋಸಿಯೇಷನ್ ಫಾರ್ ಟೆಕ್ನಾಲಜಿ ಆ್ಯಂಡ್ ಸೈನ್ಸ್ ಟುನಿಷಿಯದ ಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ಹೇತಮ್ ಸ್ಲಿಮೇನ್ ಅವರು ಗೋಲ್ಡ್ ಮೆಡಲ್ ಪ್ರದಾನ ಮಾಡಿ ಅಭಿನಂದಿಸಿದರು.

ಆಪ್ತ ಚ೦ದ್ರ ಮತಿ ಇವರು ‘ಕಿಡ್ಡಿ ಸೇಫ್ ಕನೆಕ್ಟ್ (Kiddi Safe Connect)ಎಂಬ ಯೋಜನೆಯನ್ನು, ಮಾ.22ರಿಂದ 28ರವರೆಗೆ ಆಫ್ರಿಕಾದ ಟುನಿಷಿಯದಲ್ಲಿ ನಡೆದ ಸ್ಪರ್ಧೆಯಲ್ಲಿ ಮಂಡಿಸಿದ್ದರು. ವಿವೇಕಾನಂದ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯ ಪ್ರಯೋಗಾಲಯದ ಬೋಧಕರಾದ ವೆಂಕಟೇಶ್ ಮತ್ತು ಮಂಗಳೂರಿನ ಟೆಕ್ಕೋಮಸ್ ಸಂಸ್ಥೆಯ ಸ್ಥಾಪಕರಾದ ಅಶ್ವಿನ್ ಕಲ್ಲಾಜೆ ಹಾಗೂ ಶಾಲಾ ವಿಜ್ಞಾನ ಶಿಕ್ಷಕಿ ರಂಜಿತ ಇವರ ಮಾರ್ಗದರ್ಶನದಲ್ಲಿ ಇವರು ಈ ಯೋಜನೆಯನ್ನು ಸಿದ್ಧಪಡಿಸಿದ್ದರು.

ಆಪ್ತಚಂದ್ರಮತಿ ಮುಳಿಯ ಅವರು ಪ್ರತಿಷ್ಠಿತ ಮುಳಿಯ ಜ್ಯುವೆಲ್ಸ್‌ನ ಸಿಎಂಡಿ ಕೇಶವಪ್ರಸಾದ್‌ ಮುಳಿಯ ಹಾಗೂ ಕೃಷ್ಣವೇಣಿ ಪ್ರಸಾದ್‌ ಮುಳಿಯ ದಂಪತಿಯ ಪುತ್ರಿ

Related posts

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya
error: Content is protected !!