September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ.) ಬೆಳ್ತಂಗಡಿ ತಾಲೂಕು ಇವರ ವತಿಯಿಂದ, ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ ಜರಗಿತು.

ಭಾರತೀಯ ಪರಂಪರೆಯ ಶ್ರೇಷ್ಠತೆ ತಿಳಿಯಲು ನಮ್ಮ ಪುರಾಣ ಹಾಗೂ ಇತರ ಕಾವ್ಯ ಭಾಗಗಳಲ್ಲಿ ಬರುವ ಕಥೆಗಳನ್ನು ಓದಬೇಕು. ಅಲ್ಲಿನ ಕಥೆಗಳೆಲ್ಲ ಶ್ರೇಷ್ಠ ಜೀವನ ಮೌಲ್ಯಗಳನ್ನು ಸಾರುವ ಕಥೆಗಳಾಗಿದ್ದು, ನಮ್ಮ ಬದುಕಿಗೆ ದಾರಿದೀಪಗಳಾಗಿವೆ ಎಂದು
ಉಪನ್ಯಾಸಕರಾಗಿ ಆಗಮಿಸಿದ ಉಜಿರೆ ಶ್ರೀ ಧ ಮ ಕಾಲೇಜಿನ ಉಪನ್ಯಾಸಕರಾದ ಡಾ. ಶ್ರೀಧರ ಭಟ್ ರವರು ತಿಳಿಸಿದರು. ಜೊತೆಗೆ; ಕಥೆಗಳು ನಮಗೆ ಬದುಕಿಗೆ ಜೀವನ ಶಿಕ್ಷಣವನ್ನೂ ನೀಡುವವುಗಳಾಗಿವೆ ಎಂದೂ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ. ಗಣಪತಿ ಭಟ್ ಕುಳಮರ್ವರವರು ವಹಿಸಿದ್ದರು.

ವೇದಿಕೆಯಲ್ಲಿ ಅಭಾಸಾಪದ ಜತೆ ಕಾರ್ಯದರ್ಶಿಗಳಾದ ಶ್ರೀಮತಿ ವಿನುತಾ ಆರ್ ಗೌಡರವರು ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿಕ್ಷಕರಾದ ಕೃಷ್ಣಾನಂದ, ಶ್ರೀಮತಿ ರಾಜಶ್ರೀ, ಶ್ರೀಮತಿ ಕೋಕಿಲ, ಶ್ರೀಮತಿ ಚಿತ್ರಾರವರು ಸಭೆಯಲ್ಲಿ ಹಾಜರಿದ್ದರು.

ಕಾರ್ಯಕ್ರಮದ ಸಂಯೋಜಕರಾದ ಸುಮನ್ ಯು ಎಸ್ ರವರು ಸ್ವಾಗತಿಸಿ, ವಿದ್ಯಾರ್ಥಿನಿ ಕು. ರಕ್ಷಾ ಎನ್ ವಂದಿಸಿದರು, ಕು. ಇಂದುಮತಿ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya
error: Content is protected !!