July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

ಬೆಳ್ತಂಗಡಿ : ಚುನಾವಣೆಯ ಪ್ರಕ್ರಿಯೆಗಳು ತ್ವರಿತವಾಗಿ ನಡೆಯುತ್ತಿದ್ದಂತೆ ಚುನಾವಣೆಗಾಗಿ ನಿರ್ಮಿಸಲಾದ ವಿಶೇಷ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಂಡಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಪಾಲಿಸುವ ಚೆಕ್ ಪೋಸ್ಟ್ ಗಳನ್ನು ಈಗಾಗಲೇ ತೆರೆಯಲಾಗಿದೆ. ದಿನದ 24 ಗಂಟೆಯೂ ಇವುಗಳ ಮೂಲಕ ಸಂಚರಿಸುವ ವಾಹನಗಳನ್ನು ಪರಿಶೀಲಿಸಿ ಮುಂದೆ ಬಿಡಲಾಗುತ್ತದೆ.


ಪ್ರತಿವಾಹನವನ್ನು ನಿಲ್ಲಿಸಿ ಅದರಲ್ಲಿ ಸಾಗಾಟ ಮಾಡುವ ವಸ್ತುಗಳನ್ನು ಪರಿಶೀಲಿಸಿದ ಬಳಿಕವಷ್ಟೇ ಸಂಚಾರಕ್ಕೆ ಅನುವು ಮಾಡಿಕೊಳ್ಳಲಾಗುತ್ತದೆ. ಇಲ್ಲಿ ಓರ್ವ ಸ್ಟಾಟಿಕ್ ಸರ್ವೆ ಲೈನ್ ಲೀಡರ್, ಅಬಕಾರಿ ಪೊಲೀಸ್, ಟ್ರಾಫಿಕ್ ಪೊಲೀಸ್, ಸ್ಥಳೀಯ ಠಾಣೆಯ ಪೊಲೀಸ್,ವಿಡಿಯೋ ಗ್ರಾಫರ್ ಸೇರಿದಂತೆ ಮೂರು ಪಾಳಿಗಳಲ್ಲಿ ಬೇರೆ ಬೇರೆ ತಂಡಗಳು ಕಾರ್ಯನಿರ್ವಹಿಸುತ್ತವೆ. ಇದು ಚುನಾವಣಾ ನೀತಿ ಸಂಹಿತೆ ಕೊನೆಗೊಳ್ಳುವವರೆಗೂ ಮುಂದುವರಿಯಲಿದೆ.


ಕಾರ್ಯನಿರ್ವಹಿಸದ ಗೇಟ್
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಗೇಟ್ ಇದ್ದರು ಅದು ಬಳಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಈ ಕಾರಣದಿಂದ ಇಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ವಾಹನ ತಪಾಸಣೆ ನಡೆಸಲಾಗುತ್ತದೆ. ಪರಿಸರದಲ್ಲಿ ಹೆದ್ದಾರಿ ಅಗಲೀಕರಣ ಕಾಮಗಾರಿಯು ನಡೆಯುತ್ತಿದ್ದು ವಿಪರೀತ ಧೂಳಿನ ವಾತಾವರಣವು ಕಂಡು ಬರುತ್ತದೆ. ಇಲ್ಲಿ ರಸ್ತೆಯು ಇಕ್ಕಟ್ಟಾಗಿದ್ದು ವಾಹನ ಸಂಚಾರಕ್ಕೂ ಸಮಸ್ಯೆ ಇದೆ. ತಪಾಸಣೆ ಸಂದರ್ಭ ವಾಹನಗಳ ಸರತಿಯು ಹೆಚ್ಚುತ್ತಿದೆ.


ಪಂಚಾಯಿತಿ ಕೆಲಸ ಕುಂಠಿತ
ಚೆಕ್ ಪೋಸ್ಟ್ ಗಳಲ್ಲಿ ಕೆಲವು ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ಇವರು ನೀತಿ ಸಂಹಿತೆ ಕೊನೆಗೊಳ್ಳುವವರೆಗೂ ಕಾರ್ಯನಿರ್ವಹಿಸಬೇಕಾಗಿದೆ ದಿನದ 8 ಗಂಟೆ ಇವರಿಗೆ ಕಡ್ಡಾಯ ಚೆಕ್ ಪೋಸ್ಟ್ ನಿರ್ವಹಣೆ ಜವಾಬ್ದಾರಿ ಇರುತ್ತದೆ. ಈ ಕಾರಣದಿಂದ ಪಂಚಾಯಿತಿಗಳಿಗೆ ಹೋಗಲು ಸಮಯಾವಕಾಶ ಸಿಗುವುದಿಲ್ಲ ಇದರಿಂದ ಯಾವ ಪಂಚಾಯಿತಿಗಳ ಪಿಡಿಒಗಳಿಗೆ ಹಾಗೂ ಸಿಬ್ಬಂದಿಗಳಿಗೆ ಚೆಕ್ ಪೋಸ್ಟ್ ಜವಾಬ್ದಾರಿ ನೀಡಲಾಗಿದೆಯೇ ಅಂತಹ ಪಂಚಾಯಿತಿಗಳ ಗ್ರಾಮಸ್ಥರ ಕೆಲಸಗಳು ಸಾಗುತ್ತಿಲ್ಲ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

Related posts

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya
error: Content is protected !!