23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ರಾತ್ರಿ ಗರ್ಭಾವತರಣ ವಿಧಿ, 108 ಕಲಶ ಅಭಿಷೇಕ ನಡೆಯಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕರ ದಿವ್ಯಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಕಾರ್ಯಕ್ರಮಗಳು ನಡೆದವು.

ಬೆಳಾಲು ಉದಿತಕುಮಾರ್ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರು ಸೇವಾಕರ್ತರುಗಳಾಗಿ ಸಹಕರಿಸಿದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಕೆ. ಜಯರಾಜ ಇಂದ್ರ ನೇತೃತ್ವದಲ್ಲಿ ಸ್ಥಳ ಪುರೋಹಿತ ಜೀವಿತ್ ಇಂದ್ರ ಹಾಗೂ ಪುರೋಹಿತವರ್ಗದವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

Related posts

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya
error: Content is protected !!