ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ರಾತ್ರಿ ಗರ್ಭಾವತರಣ ವಿಧಿ, 108 ಕಲಶ ಅಭಿಷೇಕ ನಡೆಯಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕರ ದಿವ್ಯಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಕಾರ್ಯಕ್ರಮಗಳು ನಡೆದವು.

ಬೆಳಾಲು ಉದಿತಕುಮಾರ್ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರು ಸೇವಾಕರ್ತರುಗಳಾಗಿ ಸಹಕರಿಸಿದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಕೆ. ಜಯರಾಜ ಇಂದ್ರ ನೇತೃತ್ವದಲ್ಲಿ ಸ್ಥಳ ಪುರೋಹಿತ ಜೀವಿತ್ ಇಂದ್ರ ಹಾಗೂ ಪುರೋಹಿತವರ್ಗದವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

Related posts

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಬೆಳ್ತಂಗಡಿ: ಬುರುಡೆ ಪ್ರಕರಣ ವಿಚಾರಣೆ ಫೆ.13ಕ್ಕೆ ಮುಂದೂಡಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ನಾಲ್ಕೂರು: ಬಾರ್ದೋಟ್ಟು ನಿವಾಸಿ ಬಾಲಕೃಷ್ಣ ಪೂಜಾರಿ ನಿಧನ

Suddi Udaya
error: Content is protected !!