25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿ

ಎಂಡೋಸಲ್ಫಾನ್ ಸಂತ್ರಸ್ಥರಿಂದ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ: ಚುನಾವಣಾ ಆಯೋಗ ಭೇಟಿ

ಕೊಕ್ಕಡ: ಸೌತಡ್ಕ ಗಣೇಶ ಕಲಾಮಂದಿರದಲ್ಲಿ ಜರುಗಿದ ಚುನಾವಣಾ ಆಯೋಗದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರು ಮಾಶಾಸನ ಹಾಗೂ ಹಕ್ಕುಪತ್ರ ನೀಡದಿರುವುದಕ್ಕೆ ಹಾಗೂ ಅಧಿಕಾರಿಗಳ ವೈಫಲ್ಯದ ಕಾರಣವನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಬಹಿಷ್ಕರಿಸಿದರು.

ಸಭೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರ ಸುಮಾರು 400 ಜನರಿಗೆ ಮಾಶಸನ ಸ್ಥಗಿತಗೊಂಡಿದ್ದು ಯುಐಡಿ ಕಾರ್ಡ್ ದೊರೆಯದೆ ಇರುವುದರಿಂದ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ಹಲವು ವರ್ಷಗಳಿಂದ ಅಕ್ರಮ ಸಕ್ರಮ ವಿತರಿಸದೆ ಎಂಡೋಸಲ್ಫಾನ್ ಸಂತ್ರಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ತಿಳಿಸಿದರು.

ನಂತರ ತುಕ್ರಪ್ಪ ಶೆಟ್ಟಿಯರವರ ದರೋಡೆಯ ಸಂದರ್ಭದಲ್ಲಿ ಅವರಿಗೆ ಬಂದೂಕನ್ನು ಇರಿಸಿಕೊಳ್ಳಲು ಮನೆಯಲ್ಲಿ ವಿನಾಯಿತಿಯನ್ನು ನೀಡಿದಂತೆ ಈ ಸರಿಯೂ ಅವರಿಗೆ ವಿನಾಯತಿ ನೀಡಬೇಕೆಂದು ಕೇಳಿಕೊಂಡಿದ್ದರು ವಿನಾಯತಿ ನೀಡದಿರುವುದಕ್ಕೆ ಅಕ್ರೋಶ ವ್ಯಕ್ತಪಡಿಸಿದರು. ಮತ್ತು 86 ವರ್ಷದ ದಾಟಿದ ಮತ್ತು ವಿಕಲಚೇತನರರಿಗೆ ಮನೆಯಿಂದಲೇ ಓಟನ್ನು ಹಾಕುವುದರಲ್ಲಿ ಅವಕಾಶ ನೀಡದಿರುವುದರ ಕುರಿತು ಅಕ್ರೋಶ ವ್ಯಕ್ತಪಡಿಸಿದರು.

ಎಂಡೋಸಲ್ಫಾನ್ ಹೋರಾಟಗಾರರು ನಮ್ಮ ಹೋರಾಟ ಚುನಾವಣಾ ಬಹಿಷ್ಕಾರವು ಪ್ರತಿನಿಧಿಗಳ ವಿರುದ್ಧ ಅಲ್ಲ ದ.ಕ ಜಿಲ್ಲಾಡಳಿತ ವಿರುದ್ಧ ಆಗಿರುತ್ತದೆ. ಎಂಡೋಸಲ್ಫಾನ್ ರಿಗೆ ಮಾಶಾಸನ ಹಾಗೂ ಹಕ್ಕುಪತ್ರಗಳು ಇತ್ಯಾದಿಗಳು ನೀಡದಿರುವುದಕ್ಕೆ ಇದು ಅಧಿಕಾರ ವೈಫಲ್ಯವಾಗಿರುವುದರಿಂದ ಅಧಿಕಾರಿಗಳ ವೈಫಲ್ಯದ ಕಾರಣವಾಗಿದೆ ಎಂಡೋಸಲ್ಫಾನ್ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ ಕೆಂಗುಡೇಲು ಎಂದರು.

ಬೆಂಗಳೂರು ಚುನಾವಣಾ ಆಯೋಗದ ನೋಡೆಲ್ ಅಧಿಕಾರಿ ವಸ್ತ್ರದ್ ಮಾತನಾಡಿ ಎಂಡೋಸಲ್ಫಾನರ ಮಾಶಾಸನ ಕುರಿತು ಬೆಂಗಳೂರು ಹಾಗೂ ಮಂಗಳೂರು ಮಟ್ಟದಲ್ಲಿ ಸಂಪರ್ಕಿಸಿ ನ್ಯಾಯ ಕೊಡಿಸುವುದಾಗಿ ಹಾಗೂ ನಿಯಾಮಾನುಸಾರ ಯಾರಿಗೆ ಓಟು ಹಾಕಲು ಆಗುವುದಿಲ್ಲ ಅವರಿಗೆ ಮನೆಯಲ್ಲಿಯೇ ಕಲ್ಪಿಸಿಕೊಡುವಂತಹ ಭರವಸೆ ಕೊಟ್ಟರು. ನಂತರ ಚುನಾವಣಾ ಬಹಿಷ್ಕಾರ ಮಾಡದಂತೆ ಅವರು ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ವೈಜಣ್ಣ , ತಾ.ಪಂ. ಅಧೀಕ್ಷಕ ಪ್ರಶಾಂತ್ ಡಿ., ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿ ಪ್ರಮೀಳಾ ರಾವ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!