24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಪ್ರಿಲ್ 07 ರಿಂದ ಪ್ರಾರಂಭಗೊAಡು 17ರವರೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಶಶಿಧರ್ ಶೆಟ್ಟಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವವು ನಡೆಯಲಿದೆ.


ಇದರ ಪೂರ್ವಭಾವಿಯಾಗಿ ಇಂದು (ಎ02) ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಉದಯ ಪಾಂಗಾಣ್ಣಯರವರ ನೇತೃತ್ವದಲ್ಲಿ ಸಂಜೆ 4 ಗಂಟೆಯಿಂದ ದೇವರ ಸನ್ನಿಧಿಯಲ್ಲಿ ಮತ್ತು ನಾಗರಕಟ್ಟೆಯಲ್ಲಿ ರಾಕ್ಷೋಘ್ನ ಹೋಮ, ವಾಸ್ತು ಹೋಮ, ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀ ಶಾಸ್ತಾ ಹಾಗೂ ದೈವಗಳ ಅಧಿವಾಸ ಹೋಮಗಳು ನಡೆಯಲಿದೆ.


ಎ.03 ಬುಧವಾರ ಬೆಳಿಗ್ಗೆ 09-19ರ ವೃಷಭ ಲಗ್ನದಲ್ಲಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀ ಶಾಸ್ತಾ ದೇವರ, ಶ್ರೀ ನಾಗ ದೇವರ , ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಅದೇ ರೀತಿ ಸಂಜೆ 7.30 ರಿಂದ ಯಕ್ಷ ಬಿಂದು ಹವ್ಯಾಸಿ ಯಕ್ಷಗಾನ ತಂಡ ಉಜಿರೆ ಕಲಾವಿದರಿಂದ ವಿದ್ಯುನ್ಮತಿ ಕಲ್ಯಾಣ ಯಕ್ಷಗಾನ ನಡೆಯಲಿದೆ.

Related posts

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!