25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

ಪುತ್ತೂರು: ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿನಿ ಆಪ್ತ ಚಂದ್ರಮತಿ ಮುಳಿಯ ಇವರು ಆಫ್ರಿಕಾದ ಟುನಿಷಿಯದ ಟುನಿಷಿಯ ಅಸೋಸಿಯೇಷನ್‌ ಫಾರ್ ದಿ ಪ್ಯೂಚರ್ ಆಫ್ ಸೈನ್ಸ್ ಟೆಕ್ನಾಲಜಿ ((ATAST – Tunisia Association for the fu- ture of Science & Technology)) I-FEST TOP 10 WINNER ವತಿಯಿಂದ ನಡೆಸಲಾದ I-FEST ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಟಾಪ್‌ಟೆನ್‌ ಪ್ರೆಸೆಂಟೇಷನ್‌ಗೆ ಅವಕಾಶ ಪಡೆದು ಇದೀಗ ಗ್ರಾಂಡ್ ಗೋಲ್ಡ್ ಮೆಡಲ್ ಬಹುಮಾನಕ್ಕೆ ಭಾಜನರಾಗಿದ್ದಾರೆ. ಟುನಿಷಿಯದಲ್ಲಿ ನಡೆದ ಸಮಾರಂಭದಲ್ಲಿ, ಅಸೋಸಿಯೇಷನ್ ಫಾರ್ ಟೆಕ್ನಾಲಜಿ ಆ್ಯಂಡ್ ಸೈನ್ಸ್ ಟುನಿಷಿಯದ ಸ್ಥಾಪಕ ಮತ್ತು ರಾಷ್ಟ್ರೀಯ ಅಧ್ಯಕ್ಷ ಹೇತಮ್ ಸ್ಲಿಮೇನ್ ಅವರು ಗೋಲ್ಡ್ ಮೆಡಲ್ ಪ್ರದಾನ ಮಾಡಿ ಅಭಿನಂದಿಸಿದರು.

ಆಪ್ತ ಚ೦ದ್ರ ಮತಿ ಇವರು ‘ಕಿಡ್ಡಿ ಸೇಫ್ ಕನೆಕ್ಟ್ (Kiddi Safe Connect)ಎಂಬ ಯೋಜನೆಯನ್ನು, ಮಾ.22ರಿಂದ 28ರವರೆಗೆ ಆಫ್ರಿಕಾದ ಟುನಿಷಿಯದಲ್ಲಿ ನಡೆದ ಸ್ಪರ್ಧೆಯಲ್ಲಿ ಮಂಡಿಸಿದ್ದರು. ವಿವೇಕಾನಂದ ತಾಂತ್ರಿಕ ಶಿಕ್ಷಣ ಮಹಾವಿದ್ಯಾಲಯ ಪ್ರಯೋಗಾಲಯದ ಬೋಧಕರಾದ ವೆಂಕಟೇಶ್ ಮತ್ತು ಮಂಗಳೂರಿನ ಟೆಕ್ಕೋಮಸ್ ಸಂಸ್ಥೆಯ ಸ್ಥಾಪಕರಾದ ಅಶ್ವಿನ್ ಕಲ್ಲಾಜೆ ಹಾಗೂ ಶಾಲಾ ವಿಜ್ಞಾನ ಶಿಕ್ಷಕಿ ರಂಜಿತ ಇವರ ಮಾರ್ಗದರ್ಶನದಲ್ಲಿ ಇವರು ಈ ಯೋಜನೆಯನ್ನು ಸಿದ್ಧಪಡಿಸಿದ್ದರು.

ಆಪ್ತಚಂದ್ರಮತಿ ಮುಳಿಯ ಅವರು ಪ್ರತಿಷ್ಠಿತ ಮುಳಿಯ ಜ್ಯುವೆಲ್ಸ್‌ನ ಸಿಎಂಡಿ ಕೇಶವಪ್ರಸಾದ್‌ ಮುಳಿಯ ಹಾಗೂ ಕೃಷ್ಣವೇಣಿ ಪ್ರಸಾದ್‌ ಮುಳಿಯ ದಂಪತಿಯ ಪುತ್ರಿ

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!