30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

ಬೆಳ್ತಂಗಡಿ; ಹೆಣ್ಣು ಮಕ್ಕಳಿಗೆ ತಮ್ಮ ಮನೆಯಲ್ಲಿ ಸ್ವತಂತ್ರ ನೀಡಿದರೆ ಮಾತ್ರ ಅವರು ತಮ್ಮ ಜೀವನಲ್ಲಿ ಉತ್ತಮ ಸ್ಥಾನಕ್ಕೆ ಬೆಳೆಯಲು ಸಾಧ್ಯ, ಆಗ ದೇಶ ಮುಂದುವರೆಯುತ್ತದೆ ಎಂದು ಬೆಳ್ತಂಗಡಿ ಮಹಿಳಾ ಸಹಕಾರಿ ಬ್ಯಾಂಕ್ ಸಿಇಓ ಹಾಗೂ ಕನ್ಯಾಡಿ ಸೇವಾಭಾರತಿ(ರಿ) ಅಧ್ಯಕ್ಷರು ಸ್ವರ್ಣ ಗೌರಿ ಹೇಳಿದರು.


ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ, ಬೆಳ್ತಂಗಡಿ ಲಯನ್ಸ್ ಮತ್ತು ಲಿಯೋ ಕ್ಲಬ್ “ಪಿಕ್ಚರ್ ಹರ್ ಇಂಪ್ಯಾಕ್ಟ್” ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಮಾ. 31ರಂದು ಬೆಳ್ತಂಗಡಿಯ ಲಯನ್ಸ್ ಭವನದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು ಹೆಣ್ಣು ಮಕ್ಕಳು ತಮ್ಮ ಶಿಕ್ಷಣಕ್ಕೆ ಮನೆ ಬಿಟ್ಟು ಹೊರಗೆ ಹೋಗಬೇಕು, ಆದರೆ ತಮ್ಮ ಸಂಸ್ಕೃತಿ ಮರೆಯಬಾರದು ಎಂದು ಅಭಿಪ್ರಾಯಪಟ್ಟರು.


ಮಹಿಳಾ ದಿನದ ಅಂಗವಾಗಿ ಈ ಸ್ಪರ್ಧೆ ಆಯೋಜಿಸಲಾಗಿದ್ದು, ಅವರಿಗೆ ಸ್ಫೂರ್ತಿ ನೀಡಿದ ಮಹಿಳೆಯೊಂದಿಗಿನ ಫೋಟೋವನ್ನು ಹಂಚಿಕೊಳ್ಳಲು ಮತ್ತು ಅವರ ಬಗ್ಗೆ ಶೀರ್ಷಿಕೆ ಬರೆಯಲು ಕೇಳಲಾಗಿತ್ತು. ಸ್ಪರ್ಧೆಯಲ್ಲಿ ಹಲವಾರು ಭಾಗವಹಿಸಿದ್ದು ಪ್ರಥಮ ಸ್ಥಾನ ವೀಣಾ ಮತ್ತು ದ್ವಿತೀಯ ಸ್ಥಾನ ರೀನಾ ಇವರಿಗೆ ಲಭಿಸಿದೆ.


ಕಾರ್ಯಕರ್ಮದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಎಲ್.ಎನ್. ಉಮೇಶ್ ಶೆಟ್ಟಿ, ಕಾರ್ಯದರ್ಶಿ ಎಲ್.ಎನ್.ಅನಂತ್ ಕೃಷ್ಣ, ಲಿಯೋ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಲಿಯೋ ಅಪ್ಸರಾ ಎಚ್.ಆರ್.ಗೌಡ, ಕಾರ್ಯದರ್ಶಿ ಲಿಯೋ ನಿರೀಕ್ಷ ಎನ್ ಮತ್ತಿತರತು ಉಪಸ್ಥಿತರಿದ್ದರು.
ಲಿಯೋ ಅಪ್ಸರಾ ಎಚ್.ಆರ್.ಗೌಡ ಸ್ವಾಗತಿಸಿ, ಲಿಯೋ ನಿರೀಕ್ಷ ಎನ್ ವಂದಿಸಿ, ಲಿಯೋ ಭಾಷಿಣಿ ಕಾರ್ಯಕ್ರಮ ನಿರೂಪಿಸಿದರು

Related posts

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya
error: Content is protected !!