37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ರಾತ್ರಿ ಗರ್ಭಾವತರಣ ವಿಧಿ, 108 ಕಲಶ ಅಭಿಷೇಕ ನಡೆಯಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕರ ದಿವ್ಯಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಕಾರ್ಯಕ್ರಮಗಳು ನಡೆದವು.

ಬೆಳಾಲು ಉದಿತಕುಮಾರ್ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರು ಸೇವಾಕರ್ತರುಗಳಾಗಿ ಸಹಕರಿಸಿದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಕೆ. ಜಯರಾಜ ಇಂದ್ರ ನೇತೃತ್ವದಲ್ಲಿ ಸ್ಥಳ ಪುರೋಹಿತ ಜೀವಿತ್ ಇಂದ್ರ ಹಾಗೂ ಪುರೋಹಿತವರ್ಗದವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

Related posts

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya
error: Content is protected !!