23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ರಾತ್ರಿ ಗರ್ಭಾವತರಣ ವಿಧಿ, 108 ಕಲಶ ಅಭಿಷೇಕ ನಡೆಯಿತು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿಭಟ್ಟಾರಕರ ದಿವ್ಯಉಪಸ್ಥಿತಿ ಮತ್ತು ಆಶೀರ್ವಾದಗಳೊಂದಿಗೆ ಕಾರ್ಯಕ್ರಮಗಳು ನಡೆದವು.

ಬೆಳಾಲು ಉದಿತಕುಮಾರ್ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರು ಸೇವಾಕರ್ತರುಗಳಾಗಿ ಸಹಕರಿಸಿದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಪ್ರತಿಷ್ಠಾಚಾರ್ಯ ಕೆ. ಜಯರಾಜ ಇಂದ್ರ ನೇತೃತ್ವದಲ್ಲಿ ಸ್ಥಳ ಪುರೋಹಿತ ಜೀವಿತ್ ಇಂದ್ರ ಹಾಗೂ ಪುರೋಹಿತವರ್ಗದವರು ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು.

Related posts

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya
error: Content is protected !!